ಅಪಘಾತ ಸಂಭವಿಸಿದಾಗ ಗಾಯಾಳುಗಳನ್ನು ರಕ್ಷಣೆ ಮಾಡುವುದು ಬಹಳ ಮುಖ್ಯ. ದೇಶದಲ್ಲಿ ರಸ್ತೆ ಅಪಘಾತದ ಗಾಯಾಳುಗಳ ಜೀವ ಉಳಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆ ಜಾರಿಗೊಳಿಸಿದೆ.
ಕೇಂದ್ರ ಸರ್ಕಾರ ಅಪಘಾತದ ಗಾಯಾಳುಗಳಿಗೆ ಕ್ಯಾಶ್ ಲೆಸ್ ಚಿಕಿತ್ಸೆ ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಕೇಂದ್ರದ ಹೆದ್ದಾರಿ, ಭೂ ಸಾರಿಗೆ ಇಲಾಖೆ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದಲೇ ರಸ್ತೆ ಅಪಘಾತದ ಸಂತ್ರಸ್ತರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಈ ಯೋಜನೆಯನ್ನ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಅಪಘಾತದ ದಿನದಿಂದ 7 ದಿನಗಳವರೆಗೆ 1.5 ಲಕ್ಷ ರೂಪಾಯಿವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ ನೀಡಲಾಗುತ್ತದೆ.
ನಿನ್ನೆಯಿಂದಲೇ ದೇಶಾದ್ಯಂತ ಈ ಯೋಜನೆ ಜಾರಿಯಾಗಿದೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಸ್ತೆ ಅಪಘಾತದ ಸಂತ್ರಸ್ತರು ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಗಳಲ್ಲಿ ಉಚಿತವಾದ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಕೇಂದ್ರದ ಹೆದ್ದಾರಿ, ಭೂ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…