ಕ್ರೀಡೆ

ಮುಂಬೈ : ಐಪಿಎಲ್ ನಲ್ಲಿ ಇಂದು MI v/s GT ; ಬಲಿಷ್ಠ ತಂಡಗಳೆರಡರ ಸೆಣಸಾಟ

ಈ ಬಾರಿ ಐಪಿಎಲ್‌ನ ಪ್ಲೇ-ಆಫ್‌ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌ ಮಂಗಳವಾರ ಪರಸ್ಪರ ಸೆಣಸಾಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದೆ.

ಸದ್ಯ ಮುಂಬೈ ತಂಡ ಆಡಿರುವ 11ರಲ್ಲಿ 7 ಪಂದ್ಯ ಗೆದ್ದಿದ್ದರೆ, ಗುಜರಾತ್‌ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿದೆ. 5 ಬಾರಿ ಚಾಂಪಿಯನ್‌ ಮುಂಬೈ ತಂಡಕ್ಕೆ ಉಳಿದ 3ರಲ್ಲಿ 2 ಪಂದ್ಯ ಗೆದ್ದರೆ ಅಧಿಕೃತವಾಗಿ ನಾಕೌಟ್‌ಗೇರಲಿದೆ. ಒಂದರಲ್ಲಿ ಗೆದ್ದರೂ ತಂಡಕ್ಕೆ ನಾಕೌಟ್‌ ರೇಸ್‌ನಲ್ಲಿ ಉಳಿದುಕೊಳ್ಳಲಿದೆ. ಈ ಬಾರಿ ತವರಿನಲ್ಲಿ ಆಡಿರುವ 5 ಪಂದ್ಯಗಳ ಪೈಕಿ 4ರಲ್ಲಿ ಗೆದ್ದಿರುವ ತಂಡ, ವಾಂಖೆಡೆಯಲ್ಲಿ ಇನ್ನೂ 2 ಪಂದ್ಯ ಆಡಬೇಕಿದೆ. ಹೀಗಾಗಿ ತಂಡ ಪ್ಲೇ-ಆಫ್‌ಗೇರುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ ಗುಜರಾತ್‌ಗೆ ಇನ್ನು 4 ಪಂದ್ಯ ಬಾಕಿಯಿದೆ. ಇದರಲ್ಲಿ 2 ಪಂದ್ಯಗಳನ್ನು ತವರಿನಲ್ಲಿ ಆಡಲಿದೆ. ಮುಂಬೈ ವಿರುದ್ಧ ಅದರದೇ ತವರಿನಲ್ಲಿ ಗೆಲ್ಲುವ ಮೂಲಕ ಪ್ಲೇ-ಆಫ್‌ ಹಾದಿಯನ್ನು ಮತ್ತಷ್ಟು ಸುಗಮಗೊಳಿಸುವುದು ತಂಡದ ಗುರಿ. ಅಲ್ಲದೆ, ಮುಂಬೈ ವಿರುದ್ಧ ಈ ಬಾರಿ ಮೊದಲ ಮುಖಾಮುಖಿಯಲ್ಲಿ ಗೆದ್ದಿದ್ದ ಗುಜರಾತ್‌, ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

6 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

6 days ago

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…

6 days ago

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…

1 week ago

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…

1 week ago

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…

1 week ago