ಕ್ರೀಡೆ

ಮುಂಬೈ : ಐಪಿಎಲ್ ನಲ್ಲಿ ಇಂದು MI v/s GT ; ಬಲಿಷ್ಠ ತಂಡಗಳೆರಡರ ಸೆಣಸಾಟ

ಈ ಬಾರಿ ಐಪಿಎಲ್‌ನ ಪ್ಲೇ-ಆಫ್‌ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌ ಮಂಗಳವಾರ ಪರಸ್ಪರ ಸೆಣಸಾಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದೆ.

ಸದ್ಯ ಮುಂಬೈ ತಂಡ ಆಡಿರುವ 11ರಲ್ಲಿ 7 ಪಂದ್ಯ ಗೆದ್ದಿದ್ದರೆ, ಗುಜರಾತ್‌ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿದೆ. 5 ಬಾರಿ ಚಾಂಪಿಯನ್‌ ಮುಂಬೈ ತಂಡಕ್ಕೆ ಉಳಿದ 3ರಲ್ಲಿ 2 ಪಂದ್ಯ ಗೆದ್ದರೆ ಅಧಿಕೃತವಾಗಿ ನಾಕೌಟ್‌ಗೇರಲಿದೆ. ಒಂದರಲ್ಲಿ ಗೆದ್ದರೂ ತಂಡಕ್ಕೆ ನಾಕೌಟ್‌ ರೇಸ್‌ನಲ್ಲಿ ಉಳಿದುಕೊಳ್ಳಲಿದೆ. ಈ ಬಾರಿ ತವರಿನಲ್ಲಿ ಆಡಿರುವ 5 ಪಂದ್ಯಗಳ ಪೈಕಿ 4ರಲ್ಲಿ ಗೆದ್ದಿರುವ ತಂಡ, ವಾಂಖೆಡೆಯಲ್ಲಿ ಇನ್ನೂ 2 ಪಂದ್ಯ ಆಡಬೇಕಿದೆ. ಹೀಗಾಗಿ ತಂಡ ಪ್ಲೇ-ಆಫ್‌ಗೇರುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ ಗುಜರಾತ್‌ಗೆ ಇನ್ನು 4 ಪಂದ್ಯ ಬಾಕಿಯಿದೆ. ಇದರಲ್ಲಿ 2 ಪಂದ್ಯಗಳನ್ನು ತವರಿನಲ್ಲಿ ಆಡಲಿದೆ. ಮುಂಬೈ ವಿರುದ್ಧ ಅದರದೇ ತವರಿನಲ್ಲಿ ಗೆಲ್ಲುವ ಮೂಲಕ ಪ್ಲೇ-ಆಫ್‌ ಹಾದಿಯನ್ನು ಮತ್ತಷ್ಟು ಸುಗಮಗೊಳಿಸುವುದು ತಂಡದ ಗುರಿ. ಅಲ್ಲದೆ, ಮುಂಬೈ ವಿರುದ್ಧ ಈ ಬಾರಿ ಮೊದಲ ಮುಖಾಮುಖಿಯಲ್ಲಿ ಗೆದ್ದಿದ್ದ ಗುಜರಾತ್‌, ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

7 hours ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

8 hours ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

2 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

2 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

2 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

3 days ago