ಈ ಬಾರಿ ಐಪಿಎಲ್ನ ಪ್ಲೇ-ಆಫ್ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮಂಗಳವಾರ ಪರಸ್ಪರ ಸೆಣಸಾಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದೆ.
ಸದ್ಯ ಮುಂಬೈ ತಂಡ ಆಡಿರುವ 11ರಲ್ಲಿ 7 ಪಂದ್ಯ ಗೆದ್ದಿದ್ದರೆ, ಗುಜರಾತ್ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿದೆ. 5 ಬಾರಿ ಚಾಂಪಿಯನ್ ಮುಂಬೈ ತಂಡಕ್ಕೆ ಉಳಿದ 3ರಲ್ಲಿ 2 ಪಂದ್ಯ ಗೆದ್ದರೆ ಅಧಿಕೃತವಾಗಿ ನಾಕೌಟ್ಗೇರಲಿದೆ. ಒಂದರಲ್ಲಿ ಗೆದ್ದರೂ ತಂಡಕ್ಕೆ ನಾಕೌಟ್ ರೇಸ್ನಲ್ಲಿ ಉಳಿದುಕೊಳ್ಳಲಿದೆ. ಈ ಬಾರಿ ತವರಿನಲ್ಲಿ ಆಡಿರುವ 5 ಪಂದ್ಯಗಳ ಪೈಕಿ 4ರಲ್ಲಿ ಗೆದ್ದಿರುವ ತಂಡ, ವಾಂಖೆಡೆಯಲ್ಲಿ ಇನ್ನೂ 2 ಪಂದ್ಯ ಆಡಬೇಕಿದೆ. ಹೀಗಾಗಿ ತಂಡ ಪ್ಲೇ-ಆಫ್ಗೇರುವ ಸಾಧ್ಯತೆ ಹೆಚ್ಚಿದೆ.
ಮತ್ತೊಂದೆಡೆ ಗುಜರಾತ್ಗೆ ಇನ್ನು 4 ಪಂದ್ಯ ಬಾಕಿಯಿದೆ. ಇದರಲ್ಲಿ 2 ಪಂದ್ಯಗಳನ್ನು ತವರಿನಲ್ಲಿ ಆಡಲಿದೆ. ಮುಂಬೈ ವಿರುದ್ಧ ಅದರದೇ ತವರಿನಲ್ಲಿ ಗೆಲ್ಲುವ ಮೂಲಕ ಪ್ಲೇ-ಆಫ್ ಹಾದಿಯನ್ನು ಮತ್ತಷ್ಟು ಸುಗಮಗೊಳಿಸುವುದು ತಂಡದ ಗುರಿ. ಅಲ್ಲದೆ, ಮುಂಬೈ ವಿರುದ್ಧ ಈ ಬಾರಿ ಮೊದಲ ಮುಖಾಮುಖಿಯಲ್ಲಿ ಗೆದ್ದಿದ್ದ ಗುಜರಾತ್, ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…