ರಾಜ್ಯದಲ್ಲಿನ ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಕೂಡಲೇ ತೆರವುಗೊಳಿಸುವ ಸಂಬಂಧ ಪ್ರತಿಪಕ್ಷ ಬಿಜೆಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ.
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮವಾರ ಪಕ್ಷದ ಕಚೇರಿ ಬಳಿ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಕರಂದ್ಲಾಜೆ ಅವರು ಮಲ್ಲೇಶ್ವರದಲ್ಲಿ ಕೆಲಕಾಲ ಖುದ್ದಾಗಿ ಪಕ್ಷದ ಇತರ ಮುಖಂಡರೊಂದಿಗೆ ಬೀದಿಗಳಲ್ಲಿ ಸಂಚರಿಸಿ ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಕೂಡಲೇ ತೆರವು ಮಾಡುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸುವ ಮನವಿ ಪತ್ರಕ್ಕೆ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿಯ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಮಾತನಾಡಿ, ಬಿಜೆಪಿ ರಾಜ್ಯ ಸರ್ಕಾರ ಇರುವಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕದಲ್ಲೂ ಕೂಡ ಪ್ರತಿ ಜಿಲ್ಲೆಯಲ್ಲಿ ನೂರಾರು ಪಾಕಿಸ್ತಾನಿ ನಿವಾಸಿಗಳಿದ್ದಾರೆ ಎಂದು ತಿಳಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ್ ಖಾಸಲೆ ಮತ್ತಿತರರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…