ಇದೇ ಮೊದಲ ಬಾರಿಗೆ ಮೇ 18 ರಂದು ಶಬರಿಮಲೆಗೆ ರಾಷ್ಟ್ರಪತಿ ದೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ರಾಷ್ಟ್ರಪತಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಮತ್ತು ಪೊಲೀಸರಿಗೆ ಸೂಚನೆ ಬಂದಿದ್ದು, ಬ್ರೌಪದಿ ಮುರ್ಮು 18 ಮತ್ತು 19 ರಂದು ಶಬರಿಮಲೆಗೆ ಹೋಗಲಿದ್ದಾರೆ.
66 ವರ್ಷಕ್ಕಿಂತ ಮೇಲ್ಪಟ್ಟ ರಾಷ್ಟ್ರಪತಿ ದೌಪದಿ ಮುರ್ಮು, ಕುಮಾರಕೋಮ್ ನಿಂದ ಟೇಕ್ ಆಫ್ ಆದ ನಂತರ ನಿಲಕ್ಕಲ್ ನಲ್ಲಿ ಹೆಲಿಕಾಪ್ಟರ್ ನಲ್ಲಿ ಇಳಿಯಲಿದ್ದಾರೆ. ತದನಂತರ ಕಾರಿನಲ್ಲಿ ಪಂಪಾ ತಲುಪಿ ಇರುಮುಡಿ ಹೊತ್ತು ತೆರಳಲಿದ್ದಾರೆ.
ಮುರ್ಮು ಅವರು ದೇವಸ್ಯಂ ಅತಿಥಿ ಗೃಹ ಅಥವಾ ಸನ್ನಿಧಾನಂನಲ್ಲಿರುವ ಶಬರಿ ಅತಿಥಿ ಗೃಹದಲ್ಲಿ ತಂಗಲಿದ್ದಾರೆ. ದರ್ಶನದ ಸಮಯವನ್ನು ನಿರ್ದಿಷ್ಟಪಡಿಸಲಾಗಿಲ್ಲ. ಭೇಟಿಯ ಸಮಯದಲ್ಲಿ ಮುರ್ಮು ಅವರು ಕೊಟ್ಟಾಯಂ ಮತ್ತು ಕುಮಾರಕೋಮ್ನಲ್ಲಿ ತಂಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. .
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…