ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದ ದಿಗ್ಗಜ ಸಂಸ್ಥೆ, ಮಂಗಳೂರಿನ ಹೆಮ್ಮೆಯ ಸಂಸ್ಥೆ ರೋಹನ್ ಕಾರ್ಪೊರೇಷನ್ ಸಂಸ್ಥೆಯು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನ ಸೂಪರ್ ಸ್ಟಾರ್ ಬಾಲಿವುಡ್ ಬಾದ್ಶಾ ಶಾರುಖಾನ್ ಅವರನ್ನು ಘೋಷಿಸಿದೆ. ರೋಹನ್ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಶಾರುಖಾನ್ ಅವರು ಸಹಿ ಮಾಡುವ ಮೂಲಕ ಹೊಸ ಮೈಲಿಗಲ್ಲಿಗೆ ಸಾಕ್ಷಿಯಾಗಿದೆ.
ಪ್ರತಿ ಬಾರಿಯೂ ಹೊಸತನದ ಮತ್ತು ಆಧುನಿಕತೆಯ ಶೈಲಿಯ ಕಟ್ಟಡದ ನಿರ್ಮಾತೃ ಆಗಿರುವ ರೋಹನ್ ಕಾರ್ಪೋರೇಷನ್ ಇದೀಗ ದೇಶದ ಸೂಪರ್ ಸ್ಟಾರ್ ಶಾರುಖಾನ್ ಅವರನ್ನು ರಾಯಭಾರಿಯನ್ನಾಗಿಸುವ ಮೂಲಕ ವಿಶೇಷತೆಗೆ ಕಾರಣವಾಗಿದೆ. ಮಂಗಳೂರಿನಲ್ಲಿ ಸ್ಥಾಪನೆಯಾದ ಮತ್ತು ಕೇಂದ್ರ ಕಚೇರಿ ಹೊಂದಿರುವ ರೋಹನ್ ಕಾರ್ಪೊರೇಷನ್ ಸಂಸ್ಥೆಯು ವಿಶ್ವಾಸ ಮತ್ತು ತನ್ನ ಅತ್ಯುತ್ತಮ ಸೇವೆಗೆ ಹೆಸರುವಾಸಿಯಾಗಿದೆ.
ಕಳೆದ ಮೂರು ದಶಕಗಳಿಂದ ರೋಹನ್ ಸಿಟಿ ಮತ್ತು ರೋಹನ್ ಸ್ಕ್ವೇರ್ ನಂತಹ ಪ್ರಮುಖ ಡೆವಲಪ್ಮೆಂಟ್ಗಳೊಂದಿಗೆ, ಮಂಗಳೂರಿನ ಆಕಾಶದೆತ್ತರದ ಆಕರ್ಷಕ ಕಟ್ಟಡಗಳನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಶಾರುಖ್ ಖಾನ್ ಅವರು ರಾಯಭಾರಿಯಾಗಿ ನಮ್ಮ ಸಂಸ್ಥೆಗೆ ಒಪ್ಪಿಗೆ ನೀಡಿರುವುದು ಇದು ಕನಸು ಹಾಗೂ ಬದ್ಧತೆಯ ಸಮ್ಮಿಲನವಾಗಿದೆ. ಶಾರುಖ್ ಖಾನ್ ಅವರು ನಮ್ಮ ಜೊತೆ ಕೈಜೋಡಿಸಿರುವುದ್ದರಿಂದ ಕರ್ನಾಟಕ ಹಾಗೂ ದೇಶಾದ್ಯಂತ ನಮ್ಮ ಸಂಸ್ಥೆ ವಿಸ್ತರಿಸಲು ನಾವು ಬದ್ದರಾಗಿದ್ದೇವೆ ಎಂದು ರೋಹನ್ ಕಾರ್ಪೋರೇಷನ್ ಚೇರ್ ಮ್ಯಾನ್ ರೋಹನ್ ಮೊಂತೇರೊ ತಿಳಿಸಿದ್ದಾರೆ.
ಶಾರುಖ್ಖಾನ್ ಮಾತನಾಡಿ, ಪರಿಶ್ರಮ, ನಾವೀನ್ಯತೆ ಮತ್ತು ಹೃದಯಮುಟ್ಟುವ ಬ್ರ್ಯಾಂಡ್ ಆಗಿರುವ ರೋಹನ್ ಕಾರ್ಪೊರೇಷನ್ನೊಂದಿಗೆ ಕೈಜೋಡಿಸುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. ವಿಶಾಲ ದೃಷ್ಟಿಕೋನದೊಂದಿಗೆ ನಾಳಿನ ನಗರಗಳನ್ನು ರೂಪಿಸುವ ಅದ್ಭುತ ಪ್ರಯಾಣದ ಭಾಗವಾಗಿರಲು ನಾನು ಎದುರು ನೋಡುತ್ತಿದ್ದೇನೆ. ಪ್ರಕೃತಿಯೊಂದಿಗೆ ನಗರ ಜೀವನವನ್ನು ಸಾಮರಸ್ಯಗೊಳಿಸುವ ದೃಢವಾದ ದೃಷ್ಟಿಕೋನದ ಬೇರನ್ನು ಹೊಂದಿರುವ ರೋಹನ್ಕಾರ್ಪೊರೇಷನ್ ಪರಿಸರವನ್ನು ಸಂರಕ್ಷಿಸುವುದರೊಂದಿಗೆ ಜೀವನದ ಗುಣಮಟ್ಟವನ್ನು ವಿಸ್ತರಿಸುವ ಉತ್ಸಾಹಭರಿತ ಸಮುದಾಯಗಳನ್ನು ಪೋಷಿಸಲು ಶ್ರಮಿಸುತ್ತಿದೆ ಎಂದು ಹೇಳಿದರು.
ಸಮಗ್ರತೆ, ಅತ್ಯುತ್ತಮತೆ, ನಾವೀನ್ಯತೆ, ಹಾಗೂ ಸುಸ್ಥಿರತೆಯ ಪ್ರಮುಖ ಮೌಲ್ಯಗಳೊಂದಿಗೆ, ಶಾರುಖ್ಖಾನ್ರೊಂದಿಗೆ ರೋಹನ್ ಕಾರ್ಪೊರೇಷನ್ರವರ ಪಾಲುದಾರಿಕೆ ಹೊಸ ಕ್ರಿಯಾತ್ಮಕ ಬೆಳವಣಿಗೆ, ವ್ಯಾಪಕ ತೊಡಗುವಿಕೆ ಮತ್ತು ದೃಢವಾದ ಬ್ರ್ಯಾಂಡ್ ಅಸ್ತಿತ್ವದ ನವಯುಗವನ್ನು ಸಂಕೇತಿಸುತ್ತಿದ್ದು , ಇದು ಕರ್ನಾಟಕದಾದ್ಯಂತ ನಿವಾಸದ ಬಗೆಗಿನ ಕನಸುಗಾರರ ಹೊಸ ತಲೆಮಾರು ಮತ್ತು ಮನೆ ಮಾಲೀಕರಿಗೆ ಸ್ಫೂರ್ತಿಯಾಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…