ಜನ ಮನದ ನಾಡಿ ಮಿಡಿತ

Advertisement

ಸುಹಾಸ್ ಶೆಟ್ಟಿಯನ್ನು ಹಿಂದುತ್ವದ ಪರ ಕೆಲಸ ಮಾಡಿದ್ದಕ್ಕೆ ರೌಡಿ ಶೀಟರ್ ಮಾಡಲಾಗಿದೆ: ಪವಿತ್ರನ್

ಸುಹಾಸ್ ಶೆಟ್ಟಿ ಒಬ್ಬ ಹಿಂದು ಸಂಘಟನೆ ಕಾರ್ಯಕರ್ತ. ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಆತನನ್ನು ಕೇವಲ ರೌಡಿಶೀಟರ್ ಎನ್ನುವ ಮೂಲಕ ಕೀಳು ಮಟ್ಟಕ್ಕಿಳಿಸುತ್ತಿದ್ದಾರೆ. ಹಿಂದುತ್ವಕ್ಕಾಗಿ ಕೆಲಸ ಮಾಡಿದ್ದಕ್ಕೆ ಪೊಲೀಸರು ರೌಡಿ ಪಟ್ಟ ನೀಡಿದ್ದರು. ಅಂಥ ವ್ಯಕ್ತಿಯನ್ನು ಕಾಂಗ್ರೆಸ್ ಸರಕಾರ ನೀಡಿದ್ದ ಪರಿಹಾರದ ಹಣದಿಂದಲೇ ಫಾಜಿಲ್ ಕುಟುಂಬ ಕೊಲೆ ಮಾಡಿಸಿದೆ. ಸರಕಾರ ಕೂಡಲೇ ಈ ಹಣವನ್ನು ವಾಪಸ್ ಪಡೆಯಬೇಕು ಎಂದು ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಕುಟುಂಬ ಹಿಂದಿನಿಂದಲೂ ಕಾಂಗ್ರೆಸ್ ಪರವಾಗಿದ್ದವರು. ಆದರೆ ಕಾಂಗ್ರೆಸ್ ನಾಯಕರು ಆತ ಹಿಂದುತ್ವವಾದಿ ಎನ್ನುವ ಕಾರಣಕ್ಕೆ ಹತ್ತಿರ ಹೋಗಿಲ್ಲ. ಕಾಂಗ್ರೆಸಿಗರಿಗೆ ಕೇವಲ ಮುಸ್ಲಿಮರು ಮಾತ್ರ ಬೇಕು, ಹಿಂದುಗಳು ಬೇಕಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹಿಂದು, ಮುಸ್ಲಿಮರು, ಕ್ರೈಸ್ತರು ಎಲ್ಲರೂ ಮತ ಹಾಕಿದ್ದಾರೆ. ಜಾಲತಾಣದಲ್ಲಿ ಕಮೆಂಟ್ ಮಾಡಿದ ಹಿಂದುಗಳನ್ನೆಲ್ಲ ಹುಡುಕಿ ಅರೆಸ್ಟ್ ಮಾಡುತ್ತಿದ್ದಾರೆ. ಮುಸ್ಲಿಮರನ್ನು ಯಾಕೆ ಬಂಧನ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಕುಡುಪುವಿನಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಯಾವುದೇ ಸಾಕ್ಷಿ ಇಲ್ಲದಿದ್ದರೂ ಪೊಲೀಸರು 22 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಸುಹಾಸ್ ಕೊಲೆ ಕೃತ್ಯದಲ್ಲಿ ಅನೇಕ ಸಾಕ್ಷಿಗಳಿದ್ದರೂ ಎಂಟು ಮಂದಿಯನ್ನು ಮಾತ್ರ ಬಂಧಿಸಿದ್ದು ಯಾಕೆ. ಹಣಕಾಸು ನೆರವು ನೀಡಿದವರು, ಸಪೋರ್ಟ್ ಮಾಡಿದವರು ಹೀಗೆ ಎಲ್ಲರನ್ನೂ ಬಂಧನ ಮಾಡಬೇಕಿತ್ತಲ್ವಾ.. ಕಾಂಗ್ರೆಸ್ ನಾಯಕರು ಹೇಳಿದಂತೆ ಪೊಲೀಸರು ಮಾಡುತ್ತಿದ್ದಾರೆಯೇ ಎಂದು ಕೇಳಿದ ಅವರು, ಬಿಜೆಪಿಯವರು ಸುಹಾಸ್ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಪಕ್ಷದಿಂದ ಜುಜುಬಿ 25 ಲಕ್ಷ ಕೊಟ್ಟು ರಾಜಕೀಯ ಲಾಭಕ್ಕೆ ನೋಡುತ್ತಿದ್ದಾರೆ. ಇವರ ನಾಯಕರು ಕೋಟಿಗಟ್ಟಲೆ ಮಾಡಿಲ್ವಾ.. ಎಂದು ಪ್ರಶ್ನಿಸಿದರು.

ಸುಹಾಸ್ ಕೊಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಕೈವಾಡ ಇದೆ, ಬಿಜೆಪಿಗೆ ಹಿಂದುತ್ವ ಕೇವಲ ರಾಜಕೀಯಕ್ಕೆ ಮಾತ್ರ. ಎರಡೂ ಪಕ್ಷಗಳು ರಾಜಕೀಯ ಲಾಭಕ್ಕೆ ನೋಡುತ್ತಿದ್ದಾರೆ ಎಂದು ಹೇಳಿದರು. ಗೋಷ್ಟಿಯಲ್ಲಿ ಧರ್ಮೇಂದ್ರ ಅಮೀನ್ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!