ಜನ ಮನದ ನಾಡಿ ಮಿಡಿತ

Advertisement

ಉಗ್ರ ದಾಳಿಗೆ ಇನ್ನಷ್ಡು ಬಲ, ಮಹಾಲಿಂಗೇಶ್ವರ ದೇವರ ಬಳಿ ಭಕ್ತರ ಪ್ರಾರ್ಥನೆ….!!

ದಕ್ಷಿಣಕನ್ನಡ: ಉಗ್ರರ ನೆಲೆಗೆ ನುಗ್ಗಿ ಉಗ್ರರ ಹುಟ್ಟಡಗಿಸಿದ ಭಾರತೀಯ ಸೇನೆಗೆ ಮತ್ತಷ್ಟು ಸ್ತೈರ್ಯ ತುಂಬಲು ಪುತ್ತೂರಿನ ಜನ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದಾರೆ.


ಭಾರತೀಯ ಸೇನೆ ನಿನ್ನೆ ತಡರಾತ್ರಿ ಈ ಕಾರ್ಯಾಚರಣೆ ನಡೆಸಿ ಹಲವಾರು ಉಗ್ರ ತಾಣಗಳನ್ನು ದ್ವಂಸ ಮಾಡಿದೆ. ಈ ದಾಳಿಯನ್ನು ಸಮರ್ಥಿಸಿ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಹತ್ತೂರ ಒಡೆಯನ ಮುಂದೆ ಪ್ರಾರ್ಥನೆ ಸಲ್ಲಿಸಿ ಕೇಂದ್ರ ಸರಕಾರ ಮತ್ತು ಭಾರತೀಯ‌ ಸೇನೆಗೆ ಶಕ್ತಿ ತುಂಬುವಂತೆ ಪ್ರಾರ್ಥಿಸಲಾಗಿದೆ. ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರರು ನಡೆಸಿದ್ದ ನರಮೇಧಕ್ಕೆ ಭಾರತೀಯ ಸೇನೆ ಸೂಕ್ತ ಉತ್ತರವನ್ನು ನೀಡಿದೆ. ಮಹಿಳೆಯರ ಮುಂದೆಯೇ ಅವರ ಮನೆಯವರನ್ನು ತಲೆಗೆ ಗುಂಡು ಹೊಡೆದು ಅಮಾನುಷವಾಗಿ ಕೊಂದಿದ್ದ ಉಗ್ರರಿಗೆ ಸೂಕ್ತ ಉತ್ತರವನ್ನು ನೀಡಲಾಗಿದ್ದು, ಇಂಥಹ ಕಾರ್ಯಾಚರಣೆಗಳು ಇನ್ನಷ್ಟು ನಡೆಯಬೇಕೆಂದು ದೇವರಲ್ಲಿ ಪ್ರಾರ್ಥಿಸಲಾಗಿದೆ.

ಇದೇ ಸಂದರ್ಭದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತರು ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ ಹಾಗು ಭಾರತೀಯ ಸೇನೆಯನ್ನೂ ಅಭಿನಂಧಿಸಿದ್ದು, ಮಹಿಳೆಯರ ಸಿಂಧೂರ ಅಳಿಸಿದ ಜಿಹಾದಿ ಉಗ್ರರಿಗೆ ಉತ್ತರ ನೀಡಲಾಗಿದೆ. ಸೇನೆಯ ಪರವಾಗಿ ದೇಶದ ಎಲ್ಲಾ ಮಸೀದಿ, ಚರ್ಚ್, ಮಠ-ಮಂದಿರ, ಗುರದ್ವಾರಗಳನ್ನು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಬೇಕೆನ್ನುವ ಒತ್ತಾಯವೂ ಪುತ್ತೂರಿನಿಂದ ಆರಂಭಗೊಂಡಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವರು ಅತ್ಯಂತ ಪ್ರಭಾವಿಶಾಲಿ ದೇವರ ಜೊತೆಗೆ ಅತ್ಯಂತ ಪುರಾತನ ದೇವಾಲಯವೂ ಆಗಿದ್ದು, ಇಲ್ಲಿ ಪ್ರಾರ್ಥಿಸಿದ ವಿಚಾರಗಳಲ್ಲಿ ಜಯ ಸಿಗುತ್ತದೆ ಎನ್ನುವ ನಂಬಿಕೆಯೂ ಈ ಭಾಗದಲ್ಲಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!