ದಕ್ಷಿಣಕನ್ನಡ: ಉಗ್ರರ ನೆಲೆಗೆ ನುಗ್ಗಿ ಉಗ್ರರ ಹುಟ್ಟಡಗಿಸಿದ ಭಾರತೀಯ ಸೇನೆಗೆ ಮತ್ತಷ್ಟು ಸ್ತೈರ್ಯ ತುಂಬಲು ಪುತ್ತೂರಿನ ಜನ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದಾರೆ.
ಭಾರತೀಯ ಸೇನೆ ನಿನ್ನೆ ತಡರಾತ್ರಿ ಈ ಕಾರ್ಯಾಚರಣೆ ನಡೆಸಿ ಹಲವಾರು ಉಗ್ರ ತಾಣಗಳನ್ನು ದ್ವಂಸ ಮಾಡಿದೆ. ಈ ದಾಳಿಯನ್ನು ಸಮರ್ಥಿಸಿ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಹತ್ತೂರ ಒಡೆಯನ ಮುಂದೆ ಪ್ರಾರ್ಥನೆ ಸಲ್ಲಿಸಿ ಕೇಂದ್ರ ಸರಕಾರ ಮತ್ತು ಭಾರತೀಯ ಸೇನೆಗೆ ಶಕ್ತಿ ತುಂಬುವಂತೆ ಪ್ರಾರ್ಥಿಸಲಾಗಿದೆ. ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರರು ನಡೆಸಿದ್ದ ನರಮೇಧಕ್ಕೆ ಭಾರತೀಯ ಸೇನೆ ಸೂಕ್ತ ಉತ್ತರವನ್ನು ನೀಡಿದೆ. ಮಹಿಳೆಯರ ಮುಂದೆಯೇ ಅವರ ಮನೆಯವರನ್ನು ತಲೆಗೆ ಗುಂಡು ಹೊಡೆದು ಅಮಾನುಷವಾಗಿ ಕೊಂದಿದ್ದ ಉಗ್ರರಿಗೆ ಸೂಕ್ತ ಉತ್ತರವನ್ನು ನೀಡಲಾಗಿದ್ದು, ಇಂಥಹ ಕಾರ್ಯಾಚರಣೆಗಳು ಇನ್ನಷ್ಟು ನಡೆಯಬೇಕೆಂದು ದೇವರಲ್ಲಿ ಪ್ರಾರ್ಥಿಸಲಾಗಿದೆ.
ಇದೇ ಸಂದರ್ಭದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತರು ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ ಹಾಗು ಭಾರತೀಯ ಸೇನೆಯನ್ನೂ ಅಭಿನಂಧಿಸಿದ್ದು, ಮಹಿಳೆಯರ ಸಿಂಧೂರ ಅಳಿಸಿದ ಜಿಹಾದಿ ಉಗ್ರರಿಗೆ ಉತ್ತರ ನೀಡಲಾಗಿದೆ. ಸೇನೆಯ ಪರವಾಗಿ ದೇಶದ ಎಲ್ಲಾ ಮಸೀದಿ, ಚರ್ಚ್, ಮಠ-ಮಂದಿರ, ಗುರದ್ವಾರಗಳನ್ನು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಬೇಕೆನ್ನುವ ಒತ್ತಾಯವೂ ಪುತ್ತೂರಿನಿಂದ ಆರಂಭಗೊಂಡಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವರು ಅತ್ಯಂತ ಪ್ರಭಾವಿಶಾಲಿ ದೇವರ ಜೊತೆಗೆ ಅತ್ಯಂತ ಪುರಾತನ ದೇವಾಲಯವೂ ಆಗಿದ್ದು, ಇಲ್ಲಿ ಪ್ರಾರ್ಥಿಸಿದ ವಿಚಾರಗಳಲ್ಲಿ ಜಯ ಸಿಗುತ್ತದೆ ಎನ್ನುವ ನಂಬಿಕೆಯೂ ಈ ಭಾಗದಲ್ಲಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…