ದಕ್ಷಿಣಕನ್ನಡ: ಉಗ್ರರ ನೆಲೆಗೆ ನುಗ್ಗಿ ಉಗ್ರರ ಹುಟ್ಟಡಗಿಸಿದ ಭಾರತೀಯ ಸೇನೆಗೆ ಮತ್ತಷ್ಟು ಸ್ತೈರ್ಯ ತುಂಬಲು ಪುತ್ತೂರಿನ ಜನ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದಾರೆ.
ಭಾರತೀಯ ಸೇನೆ ನಿನ್ನೆ ತಡರಾತ್ರಿ ಈ ಕಾರ್ಯಾಚರಣೆ ನಡೆಸಿ ಹಲವಾರು ಉಗ್ರ ತಾಣಗಳನ್ನು ದ್ವಂಸ ಮಾಡಿದೆ. ಈ ದಾಳಿಯನ್ನು ಸಮರ್ಥಿಸಿ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಹತ್ತೂರ ಒಡೆಯನ ಮುಂದೆ ಪ್ರಾರ್ಥನೆ ಸಲ್ಲಿಸಿ ಕೇಂದ್ರ ಸರಕಾರ ಮತ್ತು ಭಾರತೀಯ ಸೇನೆಗೆ ಶಕ್ತಿ ತುಂಬುವಂತೆ ಪ್ರಾರ್ಥಿಸಲಾಗಿದೆ. ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರರು ನಡೆಸಿದ್ದ ನರಮೇಧಕ್ಕೆ ಭಾರತೀಯ ಸೇನೆ ಸೂಕ್ತ ಉತ್ತರವನ್ನು ನೀಡಿದೆ. ಮಹಿಳೆಯರ ಮುಂದೆಯೇ ಅವರ ಮನೆಯವರನ್ನು ತಲೆಗೆ ಗುಂಡು ಹೊಡೆದು ಅಮಾನುಷವಾಗಿ ಕೊಂದಿದ್ದ ಉಗ್ರರಿಗೆ ಸೂಕ್ತ ಉತ್ತರವನ್ನು ನೀಡಲಾಗಿದ್ದು, ಇಂಥಹ ಕಾರ್ಯಾಚರಣೆಗಳು ಇನ್ನಷ್ಟು ನಡೆಯಬೇಕೆಂದು ದೇವರಲ್ಲಿ ಪ್ರಾರ್ಥಿಸಲಾಗಿದೆ.
ಇದೇ ಸಂದರ್ಭದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತರು ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ ಹಾಗು ಭಾರತೀಯ ಸೇನೆಯನ್ನೂ ಅಭಿನಂಧಿಸಿದ್ದು, ಮಹಿಳೆಯರ ಸಿಂಧೂರ ಅಳಿಸಿದ ಜಿಹಾದಿ ಉಗ್ರರಿಗೆ ಉತ್ತರ ನೀಡಲಾಗಿದೆ. ಸೇನೆಯ ಪರವಾಗಿ ದೇಶದ ಎಲ್ಲಾ ಮಸೀದಿ, ಚರ್ಚ್, ಮಠ-ಮಂದಿರ, ಗುರದ್ವಾರಗಳನ್ನು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಬೇಕೆನ್ನುವ ಒತ್ತಾಯವೂ ಪುತ್ತೂರಿನಿಂದ ಆರಂಭಗೊಂಡಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವರು ಅತ್ಯಂತ ಪ್ರಭಾವಿಶಾಲಿ ದೇವರ ಜೊತೆಗೆ ಅತ್ಯಂತ ಪುರಾತನ ದೇವಾಲಯವೂ ಆಗಿದ್ದು, ಇಲ್ಲಿ ಪ್ರಾರ್ಥಿಸಿದ ವಿಚಾರಗಳಲ್ಲಿ ಜಯ ಸಿಗುತ್ತದೆ ಎನ್ನುವ ನಂಬಿಕೆಯೂ ಈ ಭಾಗದಲ್ಲಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…