ದಕ್ಷಿಣಕನ್ನಡ: ಉಗ್ರರ ನೆಲೆಗೆ ನುಗ್ಗಿ ಉಗ್ರರ ಹುಟ್ಟಡಗಿಸಿದ ಭಾರತೀಯ ಸೇನೆಗೆ ಮತ್ತಷ್ಟು ಸ್ತೈರ್ಯ ತುಂಬಲು ಪುತ್ತೂರಿನ ಜನ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದಾರೆ.
ಭಾರತೀಯ ಸೇನೆ ನಿನ್ನೆ ತಡರಾತ್ರಿ ಈ ಕಾರ್ಯಾಚರಣೆ ನಡೆಸಿ ಹಲವಾರು ಉಗ್ರ ತಾಣಗಳನ್ನು ದ್ವಂಸ ಮಾಡಿದೆ. ಈ ದಾಳಿಯನ್ನು ಸಮರ್ಥಿಸಿ ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ವತಿಯಿಂದ ಹತ್ತೂರ ಒಡೆಯನ ಮುಂದೆ ಪ್ರಾರ್ಥನೆ ಸಲ್ಲಿಸಿ ಕೇಂದ್ರ ಸರಕಾರ ಮತ್ತು ಭಾರತೀಯ ಸೇನೆಗೆ ಶಕ್ತಿ ತುಂಬುವಂತೆ ಪ್ರಾರ್ಥಿಸಲಾಗಿದೆ. ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಉಗ್ರರು ನಡೆಸಿದ್ದ ನರಮೇಧಕ್ಕೆ ಭಾರತೀಯ ಸೇನೆ ಸೂಕ್ತ ಉತ್ತರವನ್ನು ನೀಡಿದೆ. ಮಹಿಳೆಯರ ಮುಂದೆಯೇ ಅವರ ಮನೆಯವರನ್ನು ತಲೆಗೆ ಗುಂಡು ಹೊಡೆದು ಅಮಾನುಷವಾಗಿ ಕೊಂದಿದ್ದ ಉಗ್ರರಿಗೆ ಸೂಕ್ತ ಉತ್ತರವನ್ನು ನೀಡಲಾಗಿದ್ದು, ಇಂಥಹ ಕಾರ್ಯಾಚರಣೆಗಳು ಇನ್ನಷ್ಟು ನಡೆಯಬೇಕೆಂದು ದೇವರಲ್ಲಿ ಪ್ರಾರ್ಥಿಸಲಾಗಿದೆ.
ಇದೇ ಸಂದರ್ಭದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತರು ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ ಹಾಗು ಭಾರತೀಯ ಸೇನೆಯನ್ನೂ ಅಭಿನಂಧಿಸಿದ್ದು, ಮಹಿಳೆಯರ ಸಿಂಧೂರ ಅಳಿಸಿದ ಜಿಹಾದಿ ಉಗ್ರರಿಗೆ ಉತ್ತರ ನೀಡಲಾಗಿದೆ. ಸೇನೆಯ ಪರವಾಗಿ ದೇಶದ ಎಲ್ಲಾ ಮಸೀದಿ, ಚರ್ಚ್, ಮಠ-ಮಂದಿರ, ಗುರದ್ವಾರಗಳನ್ನು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಬೇಕೆನ್ನುವ ಒತ್ತಾಯವೂ ಪುತ್ತೂರಿನಿಂದ ಆರಂಭಗೊಂಡಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವರು ಅತ್ಯಂತ ಪ್ರಭಾವಿಶಾಲಿ ದೇವರ ಜೊತೆಗೆ ಅತ್ಯಂತ ಪುರಾತನ ದೇವಾಲಯವೂ ಆಗಿದ್ದು, ಇಲ್ಲಿ ಪ್ರಾರ್ಥಿಸಿದ ವಿಚಾರಗಳಲ್ಲಿ ಜಯ ಸಿಗುತ್ತದೆ ಎನ್ನುವ ನಂಬಿಕೆಯೂ ಈ ಭಾಗದಲ್ಲಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…