ಮೇ 1 ರಂದು ರಾತ್ರಿ ಬಜ್ಪೆ ಸಮೀಪ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಪ್ರಕರಣದ ಬಗ್ಗೆ ಸರಿಯಾದ ತನಿಖೆನಡೆಯುತ್ತಿಲ್ಲ ಎಂದು ವ್ಯಗ್ರರಾಗಿರುವ ಕರಾವಳಿಯ ಬಿಜೆಪಿ ಶಾಸಕರು ಮತ್ತು ಸಂಸದರು ರಾಜ್ಯಪಾಲರಿಗೆ ದೂರು ನೀಡಲು ಮುಂದಾಗಿದ್ದಾರೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಪದೇ ಪದೇ ರೌಡಿ ಶೀಟರ್ ಎಂದು ಬಿಂಬಿಸುತ್ತಿರುವುದಕ್ಕೆ ಬಿಜೆಪಿ ಆರಂಭದಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಇದಲ್ಲದೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದವರೇ ಆರೋಪಿಗಳಾಗಿ ಬಂಧಿತರಾಗಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ ಗೃಹ ಸಚಿವರು ಸುಹಾಸ್ ಶೆಟ್ಟಿ ಅವರ ಮನೆಗೆ ಭೇಟಿ ನೀಡಿಲ್ಲ. ಆದರೆ ಮುಸ್ಲಿಂ ಸಂಘಟನೆಗಳ ಜೊತೆ ಸಭೆ ನಡೆಸಿದ್ದಾರೆ. ಸೌಜನ್ಯಕ್ಕಾಗಿಯಾದರೂ ಶಾಸಕರ ಸಭೆ ಕರೆದಿಲ್ಲ, ಅವರನ್ನು ಮಾತನಾಡಿಸಿಯೂ ಇಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ. ಈ ಅಸಮಾಧಾನ ಈಗ ಕುದಿಬಿಂದು ತಲುಪಿದ್ದು ಶುಕ್ರವಾರದಂದು ಜಿಲ್ಲೆಯ ಶಾಸಕರು ದೂರರ್ಜಿ ಹಿಡಿದು ರಾಜ್ಯಪಾಲರನ್ನು ಭೇಟಿಯಾಗುವುದಕ್ಕೆ ಮುಹೂರ್ತ ನಿಗದಿ ಮಾಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…