ಕರಾವಳಿ

ಯುವ ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ಬಂಟರ ದಿನಾಚರಣೆ ಪ್ರಯುಕ್ತ ಜುಲೈ 23 ರಂದು ತುಳುನಾಡ ಬಂಟೆರೆ ಪರ್ಬ 2023

ಯುವ ಬಂಟರ ಸಂಘ ಪುತ್ತೂರು ತಾಲೂಕು ಸಮಿತಿದ ಆಶ್ರಯದಲ್ಲಿ ಬಂಟ ದಿನಾಚರಣೆ ಪ್ರಯುಕ್ತ ಜುಲೈ 23 ರಂದು ತುಳುನಾಡ ಬಂಟೆರೆ ಪರ್ಬ 2023 ಎನ್ನುವ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ದಕ್ಷಿಣ ಕನ್ನಡ, ಕಾಸರಗೋಡು ಮತ್ತು ಉಡುಪಿ ಜಿಲ್ಲೆಯ ಆಯ್ದ 8 ತಂಡಗಳು ಭಾಗವಹಿಸುತ್ತದೆ. ಇದರಲ್ಲಿ ತುಳುನಾಡು ಮತ್ತು ಬಂಟ ಸಂಸ್ಕೃತಿಯ ಪ್ರದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.

ಕಳೆದ ವರ್ಷ ನನ್ನ ಅವಧಿಯಲ್ಲಿ ಒಂದು ಹೊಸ ಕಾರ್ಯಕ್ರಮ ಪ್ರಾರಂಭಿಸಿದ್ದೇವೆ. ಹಿರಿಯ ಬಂಟ ಚೇತನಗಳ ಸ್ಮರಣೆ ಮಾಡುವ ಬಂಟ ಸ್ಮೃತಿ ಕಾರ್ಯಕ್ರಮ . ಕಳೆದ ವರ್ಷ 5 ಜನರ ಸ್ಮೃತಿ ಮಾಡಿದ್ದೇವೆ. ಈ ಬಾರಿ 3 ಕ್ಕೆ ಸೀಮಿತಗೊಳಿಸಿದ್ದೇವೆ. ಒಂದು ಗಾಂಧೀವಾದಿಯಾಗಿ ಪುತ್ತೂರಿನ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿರುವ ನಿವೃತ್ತ ತಹಶಿಲ್ದಾರ್ ಚಿಲ್ಮೆತ್ತಾರ್ ಕೋಚಣ್ಣ ರೈ, ಎರಡನೆಯದ್ದು ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ರಥವನ್ನು ಸಮರ್ಪಿಸಿದ ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ. ಮೂರನೆಯದ್ದು ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾಗಿ ಹಲವಾರು ಬಂಟರ ಅಭಿವೃದ್ಧಿ ಗೆ ಸಹಕಾರಿಯಾಗಿದ್ದ ಡಾ ಮುಂಡಾಳಗುತ್ತು ತಿಮ್ಮಪ್ಪ ರೈ ಇವರ ಕುಟುಂಬಸ್ಥರ ಘನ ಉಪಸ್ಥಿತಿಯಲ್ಲಿ ಸ್ಮೃತಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ನಮ್ಮೂರಿನ ಹೆಮ್ಮೆಯ ಕರ್ನಾಟಕ ರಾಜ್ಯದ ಹೈಕೋರ್ಟ್ ನ್ಯಾಯಾಧೀಶರು ಸವಣೂರು ವಿಶ್ವಜೀತ್ ಶೆಟ್ಟಿಯವರು ಬಂದು ಸಮಾಜದ ಪರವಾಗಿ ಗೌರವ ಸ್ವೀಕರಿಸಲಿದ್ದಾರೆ.

ಕಾರ್ಯಕ್ರಮನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರು ಅಜಿತ್ ರೈ ಮಾಲಾಡಿ ಉದ್ಘಾಟಿಸಲಿದ್ದಾರೆ. ಪುತ್ತೂರಿನ ಜನಪ್ರಿಯ ಶಾಸಕರು ಅಶೋಕ್ ಕುಮಾರ್ ರೈ, ಮುಂಬಯಿ ಹೇರಂಭಾ ಗ್ರೂಪ್ ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಇಂಟರ್ ನ್ಯಾಶನಲ್ ಸಿವಿಲ್ ಸರ್ವೆಂಟ್ ನಿತ್ಯಾನಂದ ಶೆಟ್ಟಿ, ಮುಂಬಯಿ ನಿವೃತ್ತ ಡೆಪ್ಯುಟಿ ಕಮೀಷನರ್ ಶಾರ್ಪ್ ಶೂಟರ್ ಖ್ಯಾತಿಯ ಪ್ರಕಾಶ್ ಭಂಡಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ಮಹಾನಗರ ಪಾಲಿಕೆಯ ಜಂಟೀ ಆಯುಕ್ತರು ವಾಣಿ ಎಸ್ ಆಳ್ವ, ಗುಣರಂಜನ್ ಶೆಟ್ಟಿ, ಪ್ರಕಾಶ್ ರೈ ದೇರ್ಲ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಲ್ಲಿಕಾ ಪ್ರಸಾದ್ ಸಮಾರೋಪ ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷರು ಕಾವು ಹೇಮನಾಥ್ ಶೆಟ್ಟಿಯವರು ಮತ್ತು ಹೀಗೆ ಗಣ್ಯಾತಿ ಗಣ್ಯರು ನಮ್ಮೊಂದಿಗೆ ಕಾರ್ಯಕ್ರಮದಲ್ಲಿ ಜೊತೆಯಾಗಲಿದ್ದಾರೆ.

ಈ ಕಾರ್ಯಕ್ರಮವು ಒಂದು ಈವೆಂಟ್ ರೀತಿಯಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮವು ಚಿಕ್ಕದಾಗಿ, ಚೊಕ್ಕದಾಗಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ಖ್ಯಾತ ನಿರೂಪಕ ನಿತೇಶ್ ಶೆಟ್ಡಿ ಎಕ್ಕಾರ್ ಈ ಕಾರ್ಯಕ್ರಮದ ಮುಖ್ಯ ನಿರೂಪಕರಾಗಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮಗಳ ಮಧ್ಯೆ ನಮ್ಮನ್ನು ರಂಜಿಸಲು ನಮ್ಮೂರಿನ ಬಂಟ ತಾರೆಯರಾದ ವಿಜಯಕುಮಾರ್ ಕೋಡಿಯಾಲ್ ಬೈಲ್, ಸರ್ಕಸ್ ಚಿತ್ರದ ಹೀರೋ ರೂಪೇಶ್ ಶೆಟ್ಟಿ, ಹೀರೋಯಿನ್ ರಚನಾ ಶೆಟ್ಟಿ, ವಿಲನ್ ಯಶ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಸುಂದರ್ ರೈ ಪಾಣಾಜೆ. ಚಲನ ಚಿತ್ರ ಹಾಡುಗಾರ ಸಂಗೀತ ನಿರ್ಧೇಶಕ ಅರ್ಜುನ್ ಜನ್ಯನ ಶಿಷ್ಯ ನಿಶಾನ್ ರೈ ಮಠಂತಬೆಟ್ಟು, ಸಂಗೀತ ನಿರ್ದೇಶಕ ಪ್ರಸಾದ್, ಕಬಡ್ಡಿ ಆಟಗಾರ ಪ್ರಶಾಂತ್ ರೈ ಸೇರಿದಂತೆ ಹಲವಾರು ಮಂದಿ ಸಾಧಕರು ನಮ್ಮೊಂದಿಗೆ ಸೇರಿಕೊಳ್ತಾರೆ.

ಕಳೆದ 10 ವರ್ಷಗಳಿಂದ ಬಂಟ ದಿನಾಚರಣೆ ಕಾರ್ಯಕ್ರಮ ನಡೆಸುತ್ತಾ ಬಂದಿದ್ದೇವೆ. ಬೆಳಿಗ್ಗೆ ಗಣಹೋಮ ಸತ್ಯನಾರಾಯಣ ಪೂಜೆ, ನಂತರ ಸಾಂಸ್ಕೃತಿಕ ಕಾರ್ಯಕ್ರಮ, ಸಭೆ. ಮಧ್ಯಾಹ್ನ ಮುಗೀತಿತ್ತು. ಈ ಬಾರಿ ಸ್ವಲ್ಪ ಬದಲಾವಣೆ ಮಾಡಿದ್ದೇವೆ ಜುಲೈ 22 ಶನಿವಾರ ಬೆಳಿಗ್ಗೆ ಗಣಹೋಮ ಮತ್ತು ಸತ್ಯನಾರಾಯಣ ಪೂಜೆ ನಡೀತದೆ. ಜುಲೈ 23 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಸಂಪೂರ್ಣ ಮನರಂಜನಾ ಕಾರ್ಯಕ್ರಮ‌ ನಡೀತದೆ.

ಕಾರ್ಯಕ್ರಮದ ಸ್ಥಳದಲ್ಲಿ…

ಜನ್ಮ ಫೌಂಡೇಶನ್ ನ ಆನೆ ಬಾಗಿಲು ದ್ವಾರ ನಮ್ಮನ್ನು ಸ್ವಾಗಿಸುತ್ತದೆ. ಮುಂದೆ ಬಂದಾಗ ಅಶೋಕ್ ಕುಮಾರ್ ರೈ ಯವರ ತೀರ್ಥರೂಪರಾದ ಪಿಜಿನಡ್ಕ ಸಂಜೀವ ರೈ ಯವರ ಹೆಸರಿನ ದ್ವಾರ ಸ್ವಾಗಿಸುತ್ತದೆ. ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ತೀರ್ಥರೂಪರು ಡಿಂಬ್ರಿಗುತ್ತು ಸರಸ್ವತೀ ರೈ ಮತ್ತು ಮಿತ್ರಂಪಾಡಿ ಚೆನ್ನಪ್ಪ ರೈ ಹೆಸರಿನ ವೇದಿಕೆಯಲ್ಲಿ ಈ‌ ಕಾರ್ಯಕ್ರಮ ನಡೆಯಲಿದೆ.

ಮಧ್ಯೆ ಸ್ಥಳೀಯ ಪ್ರತಿಭೆಗಳ ಪ್ರದರ್ಶನವೂ ನಡೆಯಲಿದೆ.

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು (ರಿ) ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ, ಪುತ್ತೂರು ತಾಲೂಕು ಬಂಟರ ಸಂಘ, ಮಹಿಳಾ ಬಂಟರ ಸಂಘ ಮತ್ತು ವಿದ್ಯಾರ್ಥಿ ಬಂಟರ ಸಂಘದ ಸಹಕರದೊಂದಿಗೆ ಈ ಕಾರ್ಯಕ್ರಮ ನಡೀತದೆ.

ಮುಂಡಾಳ ಗುತ್ತು ಶಶಿರಾಜ್ ರೈ
ಅಧ್ಯಕ್ಷರು

ರಂಜಿನಿ ಶೆಟ್ಟಿ
ಪ್ರಧಾನ ಕಾರ್ಯದರ್ಶಿ

ಕೆ ಸಿ ಅಶೋಕ್ ಶೆಟ್ಟಿ
ಕೋಶಾಧಿಕಾರಿ

ಹರ್ಷಕುಮಾರ್ ರೈ ಮಾಡಾವು
ಕಾರ್ಯಕ್ರಮದ ಸಂಚಾಲಕರು

ಭಾಗ್ಯೇಶ್ ರೈ ಕೆಯ್ಯೂರು
ಕಾರ್ಯಕ್ರಮದ ಸಂಚಾಲಕರು

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

1 day ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

1 day ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

1 day ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

2 days ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

2 days ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

2 days ago