ಜನ ಮನದ ನಾಡಿ ಮಿಡಿತ

Advertisement

ಬಿಳಿನೆಲೆ: ಕಾರಿಗೆ ಕಾರು ಢಿಕ್ಕಿ-ಒರ್ವ ಸಾವು…!!

ಕಡಬ: ಸ್ವಿಫ್ಟ್ ಕಾರಿಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗೋಪಾಳಿ ಎಂಬಲ್ಲಿ  ಸಂಭವಿಸಿದೆ.


ಬೆಂಗಳೂರು ರಾಮನಗರದ ಯಲ್ಲಿಗಯ್ಯ(73) ಮೃತರು. ಯಲ್ಲಿಗಯ್ಯ ಅವರ ಮಗ, ಕಾರನ್ನು ಚಲಾಯಿಸುತ್ತಿದ್ದ ನವೀನ್ (29), ನವೀನ್ ತಾಯಿ ದೈಯಮ್ಮ (52) ಗಾಯಗೊಂಡವರು. ಮೇ ೬ರಂದು ಸಂಜೆ ಗೋಪಾಳಿ ಎಂಬಲ್ಲಿ ಇನ್ನೋವಾ ಕಾರನ್ನು ಅದರ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷö್ಯದಿಂದ ಚಲಾಯಿಸಿ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ಪಲ್ಟಿಯಾಗಿ ಇನ್ನೋವಾ ಕಾರಿನ ಹಿಂದಿನಿAದ ಹೋಗುತ್ತಿದ್ದ ಕಾರಿಗೆ ಬಂದು ತಾಗಿದೆ.

ಸ್ವಿಫ್ಟ್ ಕಾರಿನಲ್ಲಿದ್ದವರು ಕುಕ್ಕೆ ದೇವಸ್ಥಾನಕ್ಕೆ ಬಂದು ಊರಿಗೆ ಹಿಂದಿರುಗುತ್ತಿದ್ದವರಾಗಿದ್ದು ಕಾರಿನಲ್ಲಿದ್ದ ಚಾಲಕ ಹಾಗೂ ಮತ್ತಿಬ್ಬರನ್ನು ಕೂಡಲೇ ಆಂಬ್ಯುಲೆನ್ಸ್ನಲ್ಲಿ ಕಡಬ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಯಲ್ಲಿ ತೀವ್ರಗಾಯಗೊಂಡಿದ್ದ ಯಲ್ಲಿಗಯ್ಯ ಅವರು ಚಿಕಿತ್ಸೆ ಫಲಿಸದೆ ರಾತ್ರಿ ಮೃತರಾಗಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!