ಕಡಬ: ಸ್ವಿಫ್ಟ್ ಕಾರಿಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗೋಪಾಳಿ ಎಂಬಲ್ಲಿ ಸಂಭವಿಸಿದೆ.
ಬೆಂಗಳೂರು ರಾಮನಗರದ ಯಲ್ಲಿಗಯ್ಯ(73) ಮೃತರು. ಯಲ್ಲಿಗಯ್ಯ ಅವರ ಮಗ, ಕಾರನ್ನು ಚಲಾಯಿಸುತ್ತಿದ್ದ ನವೀನ್ (29), ನವೀನ್ ತಾಯಿ ದೈಯಮ್ಮ (52) ಗಾಯಗೊಂಡವರು. ಮೇ ೬ರಂದು ಸಂಜೆ ಗೋಪಾಳಿ ಎಂಬಲ್ಲಿ ಇನ್ನೋವಾ ಕಾರನ್ನು ಅದರ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷö್ಯದಿಂದ ಚಲಾಯಿಸಿ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ಪಲ್ಟಿಯಾಗಿ ಇನ್ನೋವಾ ಕಾರಿನ ಹಿಂದಿನಿAದ ಹೋಗುತ್ತಿದ್ದ ಕಾರಿಗೆ ಬಂದು ತಾಗಿದೆ.
ಸ್ವಿಫ್ಟ್ ಕಾರಿನಲ್ಲಿದ್ದವರು ಕುಕ್ಕೆ ದೇವಸ್ಥಾನಕ್ಕೆ ಬಂದು ಊರಿಗೆ ಹಿಂದಿರುಗುತ್ತಿದ್ದವರಾಗಿದ್ದು ಕಾರಿನಲ್ಲಿದ್ದ ಚಾಲಕ ಹಾಗೂ ಮತ್ತಿಬ್ಬರನ್ನು ಕೂಡಲೇ ಆಂಬ್ಯುಲೆನ್ಸ್ನಲ್ಲಿ ಕಡಬ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಯಲ್ಲಿ ತೀವ್ರಗಾಯಗೊಂಡಿದ್ದ ಯಲ್ಲಿಗಯ್ಯ ಅವರು ಚಿಕಿತ್ಸೆ ಫಲಿಸದೆ ರಾತ್ರಿ ಮೃತರಾಗಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…