ಕಡಬ: ಸ್ವಿಫ್ಟ್ ಕಾರಿಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗೋಪಾಳಿ ಎಂಬಲ್ಲಿ ಸಂಭವಿಸಿದೆ.
ಬೆಂಗಳೂರು ರಾಮನಗರದ ಯಲ್ಲಿಗಯ್ಯ(73) ಮೃತರು. ಯಲ್ಲಿಗಯ್ಯ ಅವರ ಮಗ, ಕಾರನ್ನು ಚಲಾಯಿಸುತ್ತಿದ್ದ ನವೀನ್ (29), ನವೀನ್ ತಾಯಿ ದೈಯಮ್ಮ (52) ಗಾಯಗೊಂಡವರು. ಮೇ ೬ರಂದು ಸಂಜೆ ಗೋಪಾಳಿ ಎಂಬಲ್ಲಿ ಇನ್ನೋವಾ ಕಾರನ್ನು ಅದರ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷö್ಯದಿಂದ ಚಲಾಯಿಸಿ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಕಾರು ಪಲ್ಟಿಯಾಗಿ ಇನ್ನೋವಾ ಕಾರಿನ ಹಿಂದಿನಿAದ ಹೋಗುತ್ತಿದ್ದ ಕಾರಿಗೆ ಬಂದು ತಾಗಿದೆ.
ಸ್ವಿಫ್ಟ್ ಕಾರಿನಲ್ಲಿದ್ದವರು ಕುಕ್ಕೆ ದೇವಸ್ಥಾನಕ್ಕೆ ಬಂದು ಊರಿಗೆ ಹಿಂದಿರುಗುತ್ತಿದ್ದವರಾಗಿದ್ದು ಕಾರಿನಲ್ಲಿದ್ದ ಚಾಲಕ ಹಾಗೂ ಮತ್ತಿಬ್ಬರನ್ನು ಕೂಡಲೇ ಆಂಬ್ಯುಲೆನ್ಸ್ನಲ್ಲಿ ಕಡಬ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಯಲ್ಲಿ ತೀವ್ರಗಾಯಗೊಂಡಿದ್ದ ಯಲ್ಲಿಗಯ್ಯ ಅವರು ಚಿಕಿತ್ಸೆ ಫಲಿಸದೆ ರಾತ್ರಿ ಮೃತರಾಗಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…