ಜನ ಮನದ ನಾಡಿ ಮಿಡಿತ

Advertisement

ಉತ್ತರಪ್ರದೇಶ : ಪಾಕಿಸ್ತಾನ್‌ ಮುರ್ದಾಬಾದ್‌ ಎಂದಿದ್ದಕ್ಕೆ ಬಾಲಕನ ಕೊಲೆಗೆ ಯತ್ನ

ಇಡೀ ದೇಶವೇ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸುತ್ತಿದ್ದರೆ ಇಲ್ಲೊಂದು ಹಳ್ಳಿಯಲ್ಲಿ ಭಾರತದ ಸಾಧನೆಯನ್ನು ಸಂಭ್ರಮಿಸಿದ್ದಕ್ಕೆ ಬಾಲಕನಿಗೆ ಚೂರಿ ಇರಿಯಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲಿನ ಪಾಕ್‌ ಉಗ್ರರ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಇದೇ ಸಂಭ್ರಮದಲ್ಲಿ ಉತ್ತರ ಪ್ರದೇಶದ ಶಹಜಹಾನ್ ಪುರದ ಧರ್ಮಘಡದಲ್ಲಿ ಸಾರ್ವಜನಿಕರು ಘೋಷಣೆಗಳನ್ನು ಕೂಗುತ್ತಿದ್ದಾಗ 14 ವರ್ಷದ ಸುರ್ಜಿತ್ ಎಂಬ ಬಾಲಕ ಹಿಂದುಸ್ತಾನ್ ಜಿಂದಾಬಾದ್ ಪಾಕಿಸ್ತಾನ್‌ ಮುರ್ದಾಬಾದ್ ಇಂದು ಘೋಷಣೆ ಕೂಗಲಾರಂಭಿಸಿದ್ದಾನೆ.

ಹೀಗೆ ಕೂಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಮೋಹಿದ್ ಖಾನ್ ಮತ್ತು ಆತನ ಸಹಚರ ವಾಸಿಮ್ ಎಂಬಾತ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಯ ನಂತರ ಆರೋಪಿಗಳನ್ನು ಸ್ಥಳೀಯರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!