ಪಹಲ್ಗಾಮ್ನಲ್ಲಿ 26 ಅಮಾಯಕ ಜೀವಗಳನ್ನು ಬಲಿ ಪಡೆದಿದ್ದ ಪಾಕಿಸ್ತಾನ ಬೆಂಬಲಿತ ಉಗ್ರರಿಗೆ ಭಾರತ ಸರಿಯಾದ ತಿರುಗೇಟು ನೀಡುತ್ತಿದ್ದು, ಪಾಕಿಸ್ತಾನದಲ್ಲಿ ನೆಲೆ ನಿಂತಿರುವ ಉಗ್ರರ ಅಡಗು ತಾಣಗಳನ್ನು ಭಾರತೀಯ ಸೇನೆ ಹೊಡೆಯಲಾರಂಭಿಸಿದೆ. ಪಾಕಿಸ್ತಾನ ಸೂಪರ್ ಲೀಗ್ನ 27 ನೇ ಪಂದ್ಯವು ಮೇ 8 ರಂದು ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ಡೇವಿಡ್ ವಾರ್ನರ್ ನಾಯಕತ್ವದ ಕರಾಚಿ ಕಿಂಗ್ಸ್ ಮತ್ತು ಬಾಬರ್ ಅಜಮ್ ನೇತೃತ್ವದ ಪೇಶಾವರ್ ಝಲ್ಮಿ ನಡುವೆ ನಡೆಯಬೇಕಿತ್ತು. ಆದರೆ ಯುದ್ಧದ ಕಾರ್ಮೋಡ ಹರಡಿದ್ದು, ಸುರಕ್ಷತೆ ದೃಷ್ಟಿಯಿಂದ ಪಂದ್ಯ ರದ್ದುಗೊಳಿಸಲಾಗಿದೆ.
ಭಾರತದ ದಾಳಿಗೆ ಪ್ರತಿದಾಳಿ ನಡೆಸಲು ಯತ್ನಿಸಿರುವ ಪಾಕಿಸ್ತಾನದ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸುವಲ್ಲಿ ಭಾರತ ಯಶಸ್ವಿಯಾಗಿದೆ. ಭಾರತದ ನಾಗರೀಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ಮಾಡಿರುವುದರಿಂದ ಕೆರಳಿ ಕೆಂಡವಾಗಿರುವ ಭಾರತ, ಪಾಕಿಸ್ತಾನದ ಪ್ರಮುಖ ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ರಾವಲ್ಪಿಂಡಿಯಲ್ಲಿರುವ ಕ್ರಿಕೆಟ್ ಕ್ರೀಡಾಂಗಣವು ಹಾನಿಗೊಳಗಾಗಿದೆ ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ.
ಈ ದಾಳಿಯಲ್ಲಿ ಕ್ರೀಡಾಂಗಣದ ಬಳಿಯಿರುವ ರೆಸ್ಟೋರೆಂಟ್ ಕೂಡ ಹಾನಿಗೊಳಗಾಗಿದೆ. ಪಾಕಿಸ್ತಾನ ಮಾಧ್ಯಮಗಳ ಪ್ರಕಾರ, ಸಂಬಂಧಪಟ್ಟ ಅಧಿಕಾರಿಗಳು ಆ ಪ್ರದೇಶವನ್ನು ಸೀಲ್ ಮಾಡಿದ್ದು, ಡ್ರೋನ್ ಎಲ್ಲಿಂದ ಬಂತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ದಾಳಿಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿರುವ ವರದಿಗಳಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…