ಕಾಶ್ಮೀರದಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ ಕೃತ್ಯವನ್ನು ಖಂಡಿಸಿ ಭಾರತ ದೇಶದ ಸೈನಿಕರು ನೀಡಿದ ಪ್ರತಿರೋಧವನ್ನು ಬೆಂಬಲಿಸಿ ಭಾರತದ ಸೈನಿಕರಿಗೆ ಧೈರ್ಯ ತುಂಬುವ ಮತ್ತು ಭಾರತ ಸರ್ಕಾರ ಕೈಗೊಂಡ ನಿರ್ಧಾರವನ್ನು ಬೆಂಬಲಿಸಿ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ದಿನಾಂಕ: 10/05/2025 ರಂದು ಶನಿವಾರ ಸಂಜೆ 4.00ಗಂಟೆಯಿಂದ 6:00ಗಂಟೆಯವರೆಗೆ ಮಂಗಳೂರಿನ ಪುರಭವನ ಮುಂಭಾಗದಲ್ಲಿರುವ ಸಾರ್ವಜನಿಕ ರಾಜಾಜೀಪಾರ್ಕ್ ಸಭಾಂಗಣದಲ್ಲಿ ಸರ್ವಧಮೀಯರ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ
ಈ ಪ್ರಾರ್ಥನೆ ದೇಶದ ಸೈನಿಕರನ್ನು ಬೆಂಬಲಿಸಲು ಮಂಗಳೂರಿನ ಏಲ್ಲಾ ಜನತೆ ಸೈನಿಕರ ಜೊತೆ ನಾವು ಇದ್ದೇವೆ ಎಂದು ತಿಳಿಸಲು ಹಾಗೂ ಕಾಶ್ಮೀರದ ಪಹಲ್ಗಾಮ್ನ ದುರಂತದಲ್ಲಿ ಮೃತರಾದ 28ಮಂದಿ ದೇಶ ಪ್ರೇಮಿಗಳಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ಇದಾಗಿದ್ದು ಈ ಕಾರ್ಯಕ್ರಮದಲ್ಲಿ ಏಲ್ಲಾ ವರ್ಗಗಳ ಜನರು, ಕಾರ್ಮಿಕರು ಭಾಗವಹಿಸಬೇಕಾಗಿ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾರವರು ವಿನಂತಿಸಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ನಡೆಸಲಾದ ಪೂರ್ವಭಾವಿ ಸಭೆಯಲ್ಲಿ ಶ್ರೀ ಪ್ರಕಾಶ್
ಸಲ್ಯಾನ್, ನಾಗೇಂದ್ರ ಕುಮಾರ್, ಕೇಶವ ಮರೋಳಿ,ಅಮೃತ್ ಕದ್ರಿ, ಯು.ಪಿ ಇಬ್ರಾಹಿಂ, ಸಿರಾಜ್ ಬಜ್ಪೆ, ಮೆಲ್ವಿನ್ ಕ್ಯಾಸ್ತಲಿನೋ, ಇಮ್ರಾನ್ ಕುದ್ರೋಳಿ, ಬಾಸ್ಕರ್ ರಾವ್, ಮನುರಾಜ್ ,ಆಲ್ಟ್ಟನ್ ಡಿಕುನ್ಹಾ, ವಸಂತ್ ಶೆಟ್ಟಿ ವೀರನಗರ, ಚಂದ್ರಹಾಸ ಕೋಡಿಕಲ್, ಮಂಜುಳಾ ನಾಯಕ್ ಶಾಂತಲಾ ಗಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…