ಕಾಶ್ಮೀರದಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ ಕೃತ್ಯವನ್ನು ಖಂಡಿಸಿ ಭಾರತ ದೇಶದ ಸೈನಿಕರು ನೀಡಿದ ಪ್ರತಿರೋಧವನ್ನು ಬೆಂಬಲಿಸಿ ಭಾರತದ ಸೈನಿಕರಿಗೆ ಧೈರ್ಯ ತುಂಬುವ ಮತ್ತು ಭಾರತ ಸರ್ಕಾರ ಕೈಗೊಂಡ ನಿರ್ಧಾರವನ್ನು ಬೆಂಬಲಿಸಿ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ದಿನಾಂಕ: 10/05/2025 ರಂದು ಶನಿವಾರ ಸಂಜೆ 4.00ಗಂಟೆಯಿಂದ 6:00ಗಂಟೆಯವರೆಗೆ ಮಂಗಳೂರಿನ ಪುರಭವನ ಮುಂಭಾಗದಲ್ಲಿರುವ ಸಾರ್ವಜನಿಕ ರಾಜಾಜೀಪಾರ್ಕ್ ಸಭಾಂಗಣದಲ್ಲಿ ಸರ್ವಧಮೀಯರ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ
ಈ ಪ್ರಾರ್ಥನೆ ದೇಶದ ಸೈನಿಕರನ್ನು ಬೆಂಬಲಿಸಲು ಮಂಗಳೂರಿನ ಏಲ್ಲಾ ಜನತೆ ಸೈನಿಕರ ಜೊತೆ ನಾವು ಇದ್ದೇವೆ ಎಂದು ತಿಳಿಸಲು ಹಾಗೂ ಕಾಶ್ಮೀರದ ಪಹಲ್ಗಾಮ್ನ ದುರಂತದಲ್ಲಿ ಮೃತರಾದ 28ಮಂದಿ ದೇಶ ಪ್ರೇಮಿಗಳಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ಇದಾಗಿದ್ದು ಈ ಕಾರ್ಯಕ್ರಮದಲ್ಲಿ ಏಲ್ಲಾ ವರ್ಗಗಳ ಜನರು, ಕಾರ್ಮಿಕರು ಭಾಗವಹಿಸಬೇಕಾಗಿ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾರವರು ವಿನಂತಿಸಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ನಡೆಸಲಾದ ಪೂರ್ವಭಾವಿ ಸಭೆಯಲ್ಲಿ ಶ್ರೀ ಪ್ರಕಾಶ್
ಸಲ್ಯಾನ್, ನಾಗೇಂದ್ರ ಕುಮಾರ್, ಕೇಶವ ಮರೋಳಿ,ಅಮೃತ್ ಕದ್ರಿ, ಯು.ಪಿ ಇಬ್ರಾಹಿಂ, ಸಿರಾಜ್ ಬಜ್ಪೆ, ಮೆಲ್ವಿನ್ ಕ್ಯಾಸ್ತಲಿನೋ, ಇಮ್ರಾನ್ ಕುದ್ರೋಳಿ, ಬಾಸ್ಕರ್ ರಾವ್, ಮನುರಾಜ್ ,ಆಲ್ಟ್ಟನ್ ಡಿಕುನ್ಹಾ, ವಸಂತ್ ಶೆಟ್ಟಿ ವೀರನಗರ, ಚಂದ್ರಹಾಸ ಕೋಡಿಕಲ್, ಮಂಜುಳಾ ನಾಯಕ್ ಶಾಂತಲಾ ಗಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…