ಕಾಶ್ಮೀರದಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ ಕೃತ್ಯವನ್ನು ಖಂಡಿಸಿ ಭಾರತ ದೇಶದ ಸೈನಿಕರು ನೀಡಿದ ಪ್ರತಿರೋಧವನ್ನು ಬೆಂಬಲಿಸಿ ಭಾರತದ ಸೈನಿಕರಿಗೆ ಧೈರ್ಯ ತುಂಬುವ ಮತ್ತು ಭಾರತ ಸರ್ಕಾರ ಕೈಗೊಂಡ ನಿರ್ಧಾರವನ್ನು ಬೆಂಬಲಿಸಿ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾರವರ ನೇತೃತ್ವದಲ್ಲಿ ದಿನಾಂಕ: 10/05/2025 ರಂದು ಶನಿವಾರ ಸಂಜೆ 4.00ಗಂಟೆಯಿಂದ 6:00ಗಂಟೆಯವರೆಗೆ ಮಂಗಳೂರಿನ ಪುರಭವನ ಮುಂಭಾಗದಲ್ಲಿರುವ ಸಾರ್ವಜನಿಕ ರಾಜಾಜೀಪಾರ್ಕ್ ಸಭಾಂಗಣದಲ್ಲಿ ಸರ್ವಧಮೀಯರ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ
ಈ ಪ್ರಾರ್ಥನೆ ದೇಶದ ಸೈನಿಕರನ್ನು ಬೆಂಬಲಿಸಲು ಮಂಗಳೂರಿನ ಏಲ್ಲಾ ಜನತೆ ಸೈನಿಕರ ಜೊತೆ ನಾವು ಇದ್ದೇವೆ ಎಂದು ತಿಳಿಸಲು ಹಾಗೂ ಕಾಶ್ಮೀರದ ಪಹಲ್ಗಾಮ್ನ ದುರಂತದಲ್ಲಿ ಮೃತರಾದ 28ಮಂದಿ ದೇಶ ಪ್ರೇಮಿಗಳಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ಇದಾಗಿದ್ದು ಈ ಕಾರ್ಯಕ್ರಮದಲ್ಲಿ ಏಲ್ಲಾ ವರ್ಗಗಳ ಜನರು, ಕಾರ್ಮಿಕರು ಭಾಗವಹಿಸಬೇಕಾಗಿ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾರವರು ವಿನಂತಿಸಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ನಡೆಸಲಾದ ಪೂರ್ವಭಾವಿ ಸಭೆಯಲ್ಲಿ ಶ್ರೀ ಪ್ರಕಾಶ್
ಸಲ್ಯಾನ್, ನಾಗೇಂದ್ರ ಕುಮಾರ್, ಕೇಶವ ಮರೋಳಿ,ಅಮೃತ್ ಕದ್ರಿ, ಯು.ಪಿ ಇಬ್ರಾಹಿಂ, ಸಿರಾಜ್ ಬಜ್ಪೆ, ಮೆಲ್ವಿನ್ ಕ್ಯಾಸ್ತಲಿನೋ, ಇಮ್ರಾನ್ ಕುದ್ರೋಳಿ, ಬಾಸ್ಕರ್ ರಾವ್, ಮನುರಾಜ್ ,ಆಲ್ಟ್ಟನ್ ಡಿಕುನ್ಹಾ, ವಸಂತ್ ಶೆಟ್ಟಿ ವೀರನಗರ, ಚಂದ್ರಹಾಸ ಕೋಡಿಕಲ್, ಮಂಜುಳಾ ನಾಯಕ್ ಶಾಂತಲಾ ಗಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…