ಜನ ಮನದ ನಾಡಿ ಮಿಡಿತ

Advertisement

ಆಕಾಶದಲ್ಲೇ ಪಾಕಿಸ್ತಾನದ ಯುದ್ಧ ವಿಮಾನ ಉಡೀಸ್ ?!!

ಗುರುವಾರ ಮೇ. 9 ರಂದು ಭಾರತ ಮತ್ತು ಪಾಕಿಸ್ತಾನ ಸೇನೆ ಮಧ್ಯೆ ಬಹಳ ದೊಡ್ಡ ಮಟ್ಟದಲ್ಲಿ ಘರ್ಷಣೆ ಆಗಿದೆ.

 

ಭಾರತೀಯ ನಾಗರಿಕರ ಮತ್ತು ನಮ್ಮ ಸೇನಾ ನೆಲೆಯನ್ನು ಟಾರ್ಗೆಟ್ ಮಾಡುತ್ತಿದ್ದ ಪಾಕಿಸ್ತಾನಿ ಯುದ್ಧ ವಿಮಾನವನ್ನು ನಮ್ಮ ಸೇನೆಯು ಹೊಡೆದುರುಳಿಸಿದ್ದಾರೆ. ಪಾಕಿಸ್ತಾನಿ ಜೆಟ್​ ಭಾರತದ ಪಠಾಣ್​ಕೋಟ್​ ಮೇಲೆ ದಾಳಿಗೆ ಯತ್ನಿಸಿ ಬರುತ್ತಿತ್ತು. ಇದನ್ನು ಗಮನಿಸಿದ ನಮ್ಮ ಏರ್​ ಡಿಫೆನ್ಸ್​ ಸಿಸ್ಟಮ್​​ ದಾಳಿ ಮಾಡಿ ಮಾಡಿದೆ. ಆಕಾಶದಲ್ಲಿ ನಡೆದ ಪಾಕಿಸ್ತಾನಿ ವಿಮಾನವನ್ನೂ ಶೂಟ್ ಮಾಡಿ ಸ್ಫೋಟಿಸಲಾಗಿದೆ. ಈ ದೃಶ್ಯವನ್ನು ನೋಡಲು ರೋಮಾಂಚನಕಾರಿಯಾಗಿದೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗ್ತಾ ಇದ್ದು ಈ ಬಗ್ಗೆ ಸೇನೆಯಿಂದ ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗಿದೆ. ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ, ಭಯೋತ್ಪಾದಕರಿಗೆ ಬುದ್ಧಿ ಕಲಿಸಲು ಆಪರೇಷನ್ ಸಿಂಧೂರ ನಡೆಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿ, 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹೊಡೆದುರುಳಿಸಿತ್ತು. ಭಯೋತ್ಪಾದಕರನ್ನು ಹೊಡೆದ ಬೆನ್ನಲ್ಲೇ ಉಗ್ರ ಪಾಕಿಸ್ತಾನ ಭಾರತ ಮೇಲೆ ದಾಳಿ ಮಾಡಿತು. ಗಡಿ ಭಾಗದಲ್ಲಿ ಭಾರತದ ಮೇಲೆ ದಾಳಿ ಮಾಡಿ ನಾಗರಿಕರ ಮೇಲೆ ಅಟ್ಯಾಕ್ ಮಾಡಿತು. ಆ ಮೂಲಕ ಪಾಕಿಸ್ತಾನ ಭಾರತವನ್ನು ಕೆರಳಿಸಿ, ಯುದ್ಧಕ್ಕೆ ರಣವಿಳ್ಯವನ್ನು ನೀಡಿತು. ಭಾರತ ತನ್ನ ರಕ್ಷಣೆಗಾಗಿ ಪಾಕಿಸ್ತಾನದ ಯಾವೆಲ್ಲ ಪ್ರದೇಶಗಳಿಂದ ದಾಳಿ ಆಗುತ್ತಿತ್ತೋ ಅಲ್ಲಿಗೆ ನುಗ್ಗಿ ಹೊಡೆದಿದೆ. ಅದರ ಜೊತೆಗೆ ಭಾರತದ ಮೇಲಿ ದಾಳಿಗೆ ಯತ್ನಿಸಿದ್ದನ್ನೂ ವಿಫಲಗೊಳಿಸಿದೆ ನಮ್ಮ ಸೇನೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!