ಪಾದಚಾರಿ ಮಹಿಳೆಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುತ್ತಾರ್ ಸಮೀಪದ ಪಂಡಿತ್ ಹೌಸ್ ಎಂಬಲ್ಲಿ ಸಂಭವಿಸಿದೆ.
ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59)ಮೃತ ಮಹಿಳೆ. ಬಸ್ಸಿನಿಂದ ಇಳಿದು ರಸ್ತೆ ದಾಟುವ ಸಂದರ್ಭ ವೈದ್ಯಕೀಯ ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಪೂರ್ಣಿಮಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೇ.16 ರಂದು ಪೂರ್ಣಿಮಾ ಅವರ ಬಾವ (ಪತಿಯ ಸಹೋದರ)ನ ಪುತ್ರನ ವಿವಾಹ ಸಮಾರಂಭವಿತ್ತು. ಆ ಪ್ರಯುಕ್ತ ಮದುವೆ ಮನೆಗೆ ತೆರಳಿ ವಾಪಸ್ಸಾಗುವಾಗ ಈ ದುರಂತ ಸಂಭವಿಸಿದೆ. ಇದೀಗ ಮದುವೆ ಮನೆಯಲ್ಲಿ ಶೋಕತಪ್ತ ವಾತಾವರಣ ಮನೆ ಮಾಡಿದೆ. ತೊಕ್ಕೊಟ್ಟು- ಮಂಗಳೂರು ವಿ.ವಿ ರಸ್ತೆಯ ಪಂಡಿತ್ ಹೌಸ್ ನಲ್ಲಿ ಪೈಪ್ ಲೈನ್ ಕಾಮಗಾರಿಗಾಗಿ ರಸ್ತೆಯನ್ನು ಅಗೆಯಲಾಗಿತ್ತು. ತದನಂತರ ಡಾಮರೀಕರಣ ನಡೆಸದೆ ಹೊಂಡಮಯವಾಗಿತ್ತು. ನೂತನವಾಗಿ ಡಾಮರೀಕರಣ ನಡೆಸಿದ ರಸ್ತೆಯ ನಡುವೆ ಇರುವ ಹೊಂಡ ತಕ್ಷಣಕ್ಕೆ ಗೋಜಿಗೆ ಬರುತ್ತಿಲ್ಲ. ಇದರಿಂದ ಕಾರು ಚಾಲಕ ಆಯತಪ್ಪಿ ಮಹಿಳೆಗೆ ಢಿಕ್ಕಿ ಹೊಡೆದಿದ್ದಾನೆನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…