ಪಾದಚಾರಿ ಮಹಿಳೆಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುತ್ತಾರ್ ಸಮೀಪದ ಪಂಡಿತ್ ಹೌಸ್ ಎಂಬಲ್ಲಿ ಸಂಭವಿಸಿದೆ.
ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59)ಮೃತ ಮಹಿಳೆ. ಬಸ್ಸಿನಿಂದ ಇಳಿದು ರಸ್ತೆ ದಾಟುವ ಸಂದರ್ಭ ವೈದ್ಯಕೀಯ ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಪೂರ್ಣಿಮಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೇ.16 ರಂದು ಪೂರ್ಣಿಮಾ ಅವರ ಬಾವ (ಪತಿಯ ಸಹೋದರ)ನ ಪುತ್ರನ ವಿವಾಹ ಸಮಾರಂಭವಿತ್ತು. ಆ ಪ್ರಯುಕ್ತ ಮದುವೆ ಮನೆಗೆ ತೆರಳಿ ವಾಪಸ್ಸಾಗುವಾಗ ಈ ದುರಂತ ಸಂಭವಿಸಿದೆ. ಇದೀಗ ಮದುವೆ ಮನೆಯಲ್ಲಿ ಶೋಕತಪ್ತ ವಾತಾವರಣ ಮನೆ ಮಾಡಿದೆ. ತೊಕ್ಕೊಟ್ಟು- ಮಂಗಳೂರು ವಿ.ವಿ ರಸ್ತೆಯ ಪಂಡಿತ್ ಹೌಸ್ ನಲ್ಲಿ ಪೈಪ್ ಲೈನ್ ಕಾಮಗಾರಿಗಾಗಿ ರಸ್ತೆಯನ್ನು ಅಗೆಯಲಾಗಿತ್ತು. ತದನಂತರ ಡಾಮರೀಕರಣ ನಡೆಸದೆ ಹೊಂಡಮಯವಾಗಿತ್ತು. ನೂತನವಾಗಿ ಡಾಮರೀಕರಣ ನಡೆಸಿದ ರಸ್ತೆಯ ನಡುವೆ ಇರುವ ಹೊಂಡ ತಕ್ಷಣಕ್ಕೆ ಗೋಜಿಗೆ ಬರುತ್ತಿಲ್ಲ. ಇದರಿಂದ ಕಾರು ಚಾಲಕ ಆಯತಪ್ಪಿ ಮಹಿಳೆಗೆ ಢಿಕ್ಕಿ ಹೊಡೆದಿದ್ದಾನೆನ್ನಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…