ಮರವಂತೆಯಲ್ಲಿ ಒಂದೆಡೆ ಸಮುದ್ರ ಮತ್ತೊಂದೆಡೆ ನದಿ ಹಾಗೂ ಮದ್ಯೆ ರಸ್ತೆಯಿದ್ದು ಇದೊಂದು ಅದ್ಭುತ ಪ್ರದೇಶ. ಇಲ್ಲಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ ಸಿದ್ಧಪಡಿಸಿ ನೀಡಿದಲ್ಲಿ ಅಗತ್ಯಕ್ರಮ ವಹಿಸಲಾಗುವುದು ಎಂದು ಕೇಂದ್ರ ಪ್ರವಾಸೋಧ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದರು. ಗುರುವಾರ ಸಂಜೆ ತ್ರಾಸಿ- ಮರವಂತೆ ಸಮುದ್ರ ತೀರ ವೀಕ್ಷಣೆ ಬಳಿಕ ಅವರು ಇಲ್ಲಿನ ಅಭಿವೃದ್ಧಿ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಬೈಂದೂರು ಕ್ಷೇತ್ರದ ಕೊಲ್ಲೂರು ಸಹಿತ ಮರವಂತೆ, ಸೋಮೇಶ್ವರ ಬೀಚ್ ಅಭಿವೃದ್ಧಿಯ ಕುರಿತು ತಿಂಗಳ ಹಿಂದೆ ಸ್ಥಳೀಯ ಶಾಸಕರು ಹಾಗೂ ಮುಖಂಡರ ಜೊತೆಗೆ ಕೇಂದ್ರ ಪ್ರವಾಸೋಧ್ಯಮ ಸಚಿವರನ್ನು ಭೇಟಿ ಮಾಡಲಾಗಿತ್ತು. ‘ಸಾಸಿ’ ಎನ್ನುವ ಯೋಜನೆಯಡಿ ಪಡುವರಿ-ಸೋಮೇಶ್ವರ, ಮರವಂತೆ ಹಾಗೂ ಕೊಲ್ಲೂರು ದೇವಸ್ಥಾನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬೇಡಿಕೆಯಿಟ್ಟು ಪ್ರಸ್ತಾವನೆ ಕಳಿಸಲಾಗಿತ್ತು. ಗುರುವಾರ ಕೇಂದ್ರ ಮಂತ್ರಿಗಳು ಈ ಮೂರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಸಕಾರಾತ್ಮಕ ಸ್ಪಂದನೆ ಮಾಡಿದ್ದಾರೆ ಎಂದರು. ಇದಕ್ಕೂ ಮೊದಲು ಕೇಂದ್ರ ಸಚಿವರು ಮರವಂತೆಯಲ್ಲಿ ಕೆಲ ತಿಂಗಳ ಹಿಂದೆ ಆರಂಭಗೊ0ಡ ಸ್ಕೈ ಡೈನಿಂಗ್ ಏರಿದರು. ಮತ್ತು ಸುತ್ತಮುತ್ತಲ ಪ್ರದೇಶಗಳ ಸೊಬಗನ್ನು ಸವಿದರು. ಈ ಸಂದರ್ಭ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮೀ ಎಸ್.ಆರ್., ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸ್ಥಳೀಯಾಡಳಿತ ಪ್ರತಿನಿಧಿಗಳು, ವಿವಿಧ ಇಲಾಖಾಧಿಕಾರಿಗಳು ಇದ್ದರು. ಪ್ರವಾಸೋದ್ಯಮ ಅಭಿವೃದ್ಧಿ ಗೆ ಸಂಬ0ಧಿಸಿ ಸಚಿವರು ಜನಪ್ರತಿನಿಧಿಗಳು ಹಾಗು ಅಧಿಕಾರಿಗಳ ಜೊತೆ ಸಭೆ ನಡೆಸಿದರು ಮತ್ತು ಪ್ರವಾಸೀ ಆಕರ್ಷಣೆ ತಾಣಗಳ ಮಾಹಿತಿ ಪಡೆದರು. ಉಡುಪಿ ಜಿಲ್ಲೆಯಲ್ಲಿ ಪ್ತವಾಸೋದ್ಯಮದ ಬೆಳವಣಿಗೆಗೆ ವಿಪುಲ ಅವಕಾಶಗಳಿರುವುದನ್ನು ಅವರು ಒಪ್ಪಿಕೊಂಡರು.ಇದಕ್ಕೂ ಮುನ್ನ ಅವರು ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…