ಮರವಂತೆಯಲ್ಲಿ ಒಂದೆಡೆ ಸಮುದ್ರ ಮತ್ತೊಂದೆಡೆ ನದಿ ಹಾಗೂ ಮದ್ಯೆ ರಸ್ತೆಯಿದ್ದು ಇದೊಂದು ಅದ್ಭುತ ಪ್ರದೇಶ. ಇಲ್ಲಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ ಸಿದ್ಧಪಡಿಸಿ ನೀಡಿದಲ್ಲಿ ಅಗತ್ಯಕ್ರಮ ವಹಿಸಲಾಗುವುದು ಎಂದು ಕೇಂದ್ರ ಪ್ರವಾಸೋಧ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದರು. ಗುರುವಾರ ಸಂಜೆ ತ್ರಾಸಿ- ಮರವಂತೆ ಸಮುದ್ರ ತೀರ ವೀಕ್ಷಣೆ ಬಳಿಕ ಅವರು ಇಲ್ಲಿನ ಅಭಿವೃದ್ಧಿ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಬೈಂದೂರು ಕ್ಷೇತ್ರದ ಕೊಲ್ಲೂರು ಸಹಿತ ಮರವಂತೆ, ಸೋಮೇಶ್ವರ ಬೀಚ್ ಅಭಿವೃದ್ಧಿಯ ಕುರಿತು ತಿಂಗಳ ಹಿಂದೆ ಸ್ಥಳೀಯ ಶಾಸಕರು ಹಾಗೂ ಮುಖಂಡರ ಜೊತೆಗೆ ಕೇಂದ್ರ ಪ್ರವಾಸೋಧ್ಯಮ ಸಚಿವರನ್ನು ಭೇಟಿ ಮಾಡಲಾಗಿತ್ತು. ‘ಸಾಸಿ’ ಎನ್ನುವ ಯೋಜನೆಯಡಿ ಪಡುವರಿ-ಸೋಮೇಶ್ವರ, ಮರವಂತೆ ಹಾಗೂ ಕೊಲ್ಲೂರು ದೇವಸ್ಥಾನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಬೇಡಿಕೆಯಿಟ್ಟು ಪ್ರಸ್ತಾವನೆ ಕಳಿಸಲಾಗಿತ್ತು. ಗುರುವಾರ ಕೇಂದ್ರ ಮಂತ್ರಿಗಳು ಈ ಮೂರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಸಕಾರಾತ್ಮಕ ಸ್ಪಂದನೆ ಮಾಡಿದ್ದಾರೆ ಎಂದರು. ಇದಕ್ಕೂ ಮೊದಲು ಕೇಂದ್ರ ಸಚಿವರು ಮರವಂತೆಯಲ್ಲಿ ಕೆಲ ತಿಂಗಳ ಹಿಂದೆ ಆರಂಭಗೊ0ಡ ಸ್ಕೈ ಡೈನಿಂಗ್ ಏರಿದರು. ಮತ್ತು ಸುತ್ತಮುತ್ತಲ ಪ್ರದೇಶಗಳ ಸೊಬಗನ್ನು ಸವಿದರು. ಈ ಸಂದರ್ಭ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮೀ ಎಸ್.ಆರ್., ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸ್ಥಳೀಯಾಡಳಿತ ಪ್ರತಿನಿಧಿಗಳು, ವಿವಿಧ ಇಲಾಖಾಧಿಕಾರಿಗಳು ಇದ್ದರು. ಪ್ರವಾಸೋದ್ಯಮ ಅಭಿವೃದ್ಧಿ ಗೆ ಸಂಬ0ಧಿಸಿ ಸಚಿವರು ಜನಪ್ರತಿನಿಧಿಗಳು ಹಾಗು ಅಧಿಕಾರಿಗಳ ಜೊತೆ ಸಭೆ ನಡೆಸಿದರು ಮತ್ತು ಪ್ರವಾಸೀ ಆಕರ್ಷಣೆ ತಾಣಗಳ ಮಾಹಿತಿ ಪಡೆದರು. ಉಡುಪಿ ಜಿಲ್ಲೆಯಲ್ಲಿ ಪ್ತವಾಸೋದ್ಯಮದ ಬೆಳವಣಿಗೆಗೆ ವಿಪುಲ ಅವಕಾಶಗಳಿರುವುದನ್ನು ಅವರು ಒಪ್ಪಿಕೊಂಡರು.ಇದಕ್ಕೂ ಮುನ್ನ ಅವರು ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…