ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸರ್ಕಾರಿ ನೌಕರರ ರಜೆಗಳನ್ನು ರದ್ದುಗೊಳಿಸಲಾಗಿದೆ.ಯಾವುದೇ ತುರ್ತು ಸಂದರ್ಭದಲ್ಲಿ ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಸಿದ್ಧತೆಗಳನ್ನು ಪರಿಶೀಲಿಸಲು ಅಧಿಕಾರಿಗಳು ಸಭೆ ನಡೆಸಿರುವುದಾಗಿ ವರದಿಯಾಗಿದೆ.
ದೆಹಲಿಯಾದ್ಯಂತ ಭದ್ರತೆ ಕೈಗೊಳ್ಳಲಾಗಿದ್ದು, ರಾತ್ರಿ ವೇಳೆ ಗಸ್ತು ಹೆಚ್ಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಮುಂದಿನ ಆದೇಶದವರೆಗೆ ರಜೆ ತೆಗೆದುಕೊಳ್ಳುವುದನ್ನು ನಿಷೇಧಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.
ಎಲ್ಲಾ ವಲಯಗಳ ವಿಶೇಷ ಆಯುಕ್ತರು 15 ಜಿಲ್ಲೆಗಳ ಉಪ ಆಯುಕ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎಲ್ಲಾ ಡಿಸಿಪಿಗಳು ತಮ್ಮ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಡಿಸಿಪಿಗಳು ಈಗಾಗಲೇ ಎಸಿಪಿಗಳು ಸೇರಿದಂತೆ ಅಧೀನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ದೆಹಲಿ ಪೊಲೀಸರು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಮಾಲ್ಗಳು, ಮಾರುಕಟ್ಟೆಗಳು, ಮೆಟ್ರೊ ನಿಲ್ದಾಣಗಳು, ಹೋಟೆಲ್ಗಳು, ವಸತಿ ಸಮುಚ್ಚಯ. ವಿಮಾನ ನಿಲ್ದಾಣಗಳು ಸೇರಿದಂತೆ ಜನದಟ್ಟಣೆ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಲವಡೆ ತಪಾಸಣೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ದೆಹಲಿ ನಗರ ಸೇರಿದಂತೆ ಗಡಿ ಪ್ರದೇಶಗಳಲ್ಲಿ ಪೊಲೀಸ್ ತಪಾಸಣೆ ಹೆಚ್ಚಿಸಲಾಗಿದ್ದು, ದೆಹಲಿಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…