ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಮಂಜೂರು ಮಾಡಿದೆ ಎಂದು ಶಾಸಕ ಅಶೋಕ್ ರೈ ಅವರು ತಿಳಿಸಿದ್ದಾರೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಹೊಂದುತ್ತಿದ್ದು ಅಲ್ಲಿದ್ದ ಅನಧಿಕೃತ ಮನೆಗಳನ್ನು ಈಗಾಗಲೇ ತೆರವು ಮಾಡಲಾಗಿದೆ. ಸದ್ಯ ಅಲ್ಲಿ ಮಹಿಳಾ ಪೊಲೀಸ್ ಠಾಣೆ ಕಟ್ಟಡವಿದ್ದು ಅದನ್ನು ತೆರವು ಮಾಡುವುದು ಅಥವಾ ಬೇರೆಡೆ ಸ್ಥಳಾಂತರ ಮಾಡಿಸುವುದಾಗಿ ಈ ಹಿಂದೆ ಶಾಸಕರು ತಿಳಿಸಿದ್ದರು. ಈ ಕಟ್ಟಡ ತೆರವುಗೊಂಡಲ್ಲಿ ದೇವಸ್ಥಾನ ಸುಂದರವಾಗಿ ರೂಪುಗೊಂಡAತಾಗುತ್ತದೆ. ಹೊಸ ಮಹಿಳಾ ಠಾಣೆಗೆ ಬಸ್ ನಿಲ್ದಾಣದ ಬಳಿ ಸ. ನಂ.,124/5ಪಿ2 ರಲ್ಲಿ 8 ಸೆಂಟ್ಸ್ ಜಾಗವನ್ನು ಶಾಸಕರ ಮನವಿ ಮೇರೆಗೆ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಅಕ್ರಮವಾಗಿದ್ದ ಮನೆಗಳನ್ನು ತೆರವುಗೊಳಿಸಿದ ಬಳಿಕ ದೇವಳಕ್ಕೆ ಅಡ್ಡವಾಗಿದ್ದ ಮಹಿಳಾ ಪೊಲೀಸ್ ಠಾಣಾ ಕಟ್ಟಡವನ್ನು ತೆರವು ಮಾಡಬೇಕಿದೆ ಎಂದು ಅನೇಕ ಭಕ್ತಾದಿಗಳು ಶಾಸಕರಲ್ಲಿ ಮೌಖಿಕ ಮನವಿಯನ್ನು ಮಾಡಿಕೊಂಡಿದ್ದರು. ಈ ಕಟ್ಟಡ ತೆರವು ಮಾಡಿದ್ದೇ ಆದಲ್ಲಿ ದೇವಸ್ಥಾನಕ್ಕೆ ಇನ್ನಷ್ಟು ಜಾಗ ಲಭ್ಯವಾಗಲಿದ್ದು ಮಾತ್ರವಲ್ಲದೆ ದೇವಸ್ಥಾನ ಹಾಗೂ ದೇವಳದ ಪವಿತ್ರ ಕೆರೆಯೂ ಅತಿ ಸುಂದರವಾಗಿ ಕಾಣಿಸಲಿದೆ. ಠಾಣಾ ಕಟ್ಟಡವನ್ನು ತೆರವು ಮಾಡಬೇಕಾದಲ್ಲಿ ಹೊಸ ಠಾಣೆಯನ್ನು ನಿರ್ಮಾಣ ಮಾಡಬೇಕಿತ್ತು. ತಾನೇ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಜಾಗ ಹುಡುಕಿದ ಶಾಸಕರು ಬಸ್ ನಿಲ್ದಾಣದ ಬಳಿಕ 8 ಸೆಂಟ್ಸ್ ಜಾಗವನ್ನು ಪಡೆಯುವಲ್ಲಿ ಸಫಲರಾದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇದ್ದ ಹಳೆಯ ಪೊಲೀಸ್ ಠಾಣಾ ಕಟ್ಟಡ ಈಗಿನ ಮಹಿಳಾ ಪೊಲೀಸ್ ಠಾಣೆಯನ್ನು ಬಸ್ ನಿಲ್ದಾಣದ ಬಳಿ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ಕಂದಾಯ ಇಲಾಖೆ ಜಾಗವನ್ನು ಗುರುತಿಸಿ ಆದೇಶವನ್ನು ಹೊರಡಿಸಿದೆ. ಕಟ್ಟಡ ನಿರ್ಮಾಣಕ್ಕೆ ಇನ್ನು ಶೀಘ್ರವೇ ಅನುದಾನವೂ ಬರುತ್ತದೆ.ಹೊಸ ಕಟ್ಟಡ ನಿರ್ಮಾಣವಾದ ಬಳಿಕ ಈಗ ಇರುವ ಠಾಣೆಯನ್ನು ಕೆಡವಲಾಗುತ್ತದೆ, ಇದು ದೇವಳಕ್ಕೆ ಸೇರಿದ ಜಾಗದಲ್ಲಿರುವ ಕಾರಣ ಠಾಣೆಯ ಕಟ್ಟಡವನ್ನು ಕೆಡವಿ ಆ ಜಾಗವನ್ನು ದೇವರಿಗೆ ನೀಡಲಾಗುತ್ತದೆ. ದೇವಸ್ಥಾನದ ಜಾಗವನ್ನು ಯಾರು ಅಕ್ರಮಿಸಿಕೊಂಡರೂ ಅದನ್ನು ಬಿಡುವ ಪ್ರಶ್ನೆಯೇ ಇಲ್ಲ. ದೇವರ ಜಾಗ ದೇವರಿಗೆ ಸೇರಬೇಕು. ಬಸ್ ನಿಲ್ದಾಣದ ಬಳಿ ಆಧುನಿಕ ಶೈಲಿಯ ಹೊಸ ಮಹಿಳಾ ಪೊಲೀಸ್ ಠಾಣೆ ಶೀಘ್ರವೇ ನಿರ್ಮಾಣವಾಗಲಿದೆ. ಪುತ್ತೂರು ಬಸ್ ನಿಲ್ದಾಣದ ಬಳಿ ಮಹಿಳಾ ಪೊಲೀಸ್ ಠಾಣೆ ನಿರ್ಮಾಣವಾಗುತ್ತಿರುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಅತ್ಯಂತ ಅನುಕೂಲ ಎಂಬ ಮಾತುಗಳು ಕೇಳಿ ಬಂದಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…