ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಮಹಿಳಾ ಪೊಲೀಸ್ ಠಾಣೆ ಕಟ್ಟಡವು ಸ್ಥಳಾಂತರವಾಗಲಿದ್ದು ಪುತ್ತೂರು ಬಸ್ ನಿಲ್ದಾಣದ ಬಳಿ ಹೊಸ ಠಾಣೆ ನಿರ್ಮಾಣಕ್ಕೆ ಕಂದಾಯ ಇಲಾಖೆ ಜಾಗ ಮಂಜೂರು ಮಾಡಿದೆ ಎಂದು ಶಾಸಕ ಅಶೋಕ್ ರೈ ಅವರು ತಿಳಿಸಿದ್ದಾರೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಹೊಂದುತ್ತಿದ್ದು ಅಲ್ಲಿದ್ದ ಅನಧಿಕೃತ ಮನೆಗಳನ್ನು ಈಗಾಗಲೇ ತೆರವು ಮಾಡಲಾಗಿದೆ. ಸದ್ಯ ಅಲ್ಲಿ ಮಹಿಳಾ ಪೊಲೀಸ್ ಠಾಣೆ ಕಟ್ಟಡವಿದ್ದು ಅದನ್ನು ತೆರವು ಮಾಡುವುದು ಅಥವಾ ಬೇರೆಡೆ ಸ್ಥಳಾಂತರ ಮಾಡಿಸುವುದಾಗಿ ಈ ಹಿಂದೆ ಶಾಸಕರು ತಿಳಿಸಿದ್ದರು. ಈ ಕಟ್ಟಡ ತೆರವುಗೊಂಡಲ್ಲಿ ದೇವಸ್ಥಾನ ಸುಂದರವಾಗಿ ರೂಪುಗೊಂಡAತಾಗುತ್ತದೆ. ಹೊಸ ಮಹಿಳಾ ಠಾಣೆಗೆ ಬಸ್ ನಿಲ್ದಾಣದ ಬಳಿ ಸ. ನಂ.,124/5ಪಿ2 ರಲ್ಲಿ 8 ಸೆಂಟ್ಸ್ ಜಾಗವನ್ನು ಶಾಸಕರ ಮನವಿ ಮೇರೆಗೆ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಅಕ್ರಮವಾಗಿದ್ದ ಮನೆಗಳನ್ನು ತೆರವುಗೊಳಿಸಿದ ಬಳಿಕ ದೇವಳಕ್ಕೆ ಅಡ್ಡವಾಗಿದ್ದ ಮಹಿಳಾ ಪೊಲೀಸ್ ಠಾಣಾ ಕಟ್ಟಡವನ್ನು ತೆರವು ಮಾಡಬೇಕಿದೆ ಎಂದು ಅನೇಕ ಭಕ್ತಾದಿಗಳು ಶಾಸಕರಲ್ಲಿ ಮೌಖಿಕ ಮನವಿಯನ್ನು ಮಾಡಿಕೊಂಡಿದ್ದರು. ಈ ಕಟ್ಟಡ ತೆರವು ಮಾಡಿದ್ದೇ ಆದಲ್ಲಿ ದೇವಸ್ಥಾನಕ್ಕೆ ಇನ್ನಷ್ಟು ಜಾಗ ಲಭ್ಯವಾಗಲಿದ್ದು ಮಾತ್ರವಲ್ಲದೆ ದೇವಸ್ಥಾನ ಹಾಗೂ ದೇವಳದ ಪವಿತ್ರ ಕೆರೆಯೂ ಅತಿ ಸುಂದರವಾಗಿ ಕಾಣಿಸಲಿದೆ. ಠಾಣಾ ಕಟ್ಟಡವನ್ನು ತೆರವು ಮಾಡಬೇಕಾದಲ್ಲಿ ಹೊಸ ಠಾಣೆಯನ್ನು ನಿರ್ಮಾಣ ಮಾಡಬೇಕಿತ್ತು. ತಾನೇ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕರೆಸಿ ಜಾಗ ಹುಡುಕಿದ ಶಾಸಕರು ಬಸ್ ನಿಲ್ದಾಣದ ಬಳಿಕ 8 ಸೆಂಟ್ಸ್ ಜಾಗವನ್ನು ಪಡೆಯುವಲ್ಲಿ ಸಫಲರಾದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇದ್ದ ಹಳೆಯ ಪೊಲೀಸ್ ಠಾಣಾ ಕಟ್ಟಡ ಈಗಿನ ಮಹಿಳಾ ಪೊಲೀಸ್ ಠಾಣೆಯನ್ನು ಬಸ್ ನಿಲ್ದಾಣದ ಬಳಿ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ಕಂದಾಯ ಇಲಾಖೆ ಜಾಗವನ್ನು ಗುರುತಿಸಿ ಆದೇಶವನ್ನು ಹೊರಡಿಸಿದೆ. ಕಟ್ಟಡ ನಿರ್ಮಾಣಕ್ಕೆ ಇನ್ನು ಶೀಘ್ರವೇ ಅನುದಾನವೂ ಬರುತ್ತದೆ.ಹೊಸ ಕಟ್ಟಡ ನಿರ್ಮಾಣವಾದ ಬಳಿಕ ಈಗ ಇರುವ ಠಾಣೆಯನ್ನು ಕೆಡವಲಾಗುತ್ತದೆ, ಇದು ದೇವಳಕ್ಕೆ ಸೇರಿದ ಜಾಗದಲ್ಲಿರುವ ಕಾರಣ ಠಾಣೆಯ ಕಟ್ಟಡವನ್ನು ಕೆಡವಿ ಆ ಜಾಗವನ್ನು ದೇವರಿಗೆ ನೀಡಲಾಗುತ್ತದೆ. ದೇವಸ್ಥಾನದ ಜಾಗವನ್ನು ಯಾರು ಅಕ್ರಮಿಸಿಕೊಂಡರೂ ಅದನ್ನು ಬಿಡುವ ಪ್ರಶ್ನೆಯೇ ಇಲ್ಲ. ದೇವರ ಜಾಗ ದೇವರಿಗೆ ಸೇರಬೇಕು. ಬಸ್ ನಿಲ್ದಾಣದ ಬಳಿ ಆಧುನಿಕ ಶೈಲಿಯ ಹೊಸ ಮಹಿಳಾ ಪೊಲೀಸ್ ಠಾಣೆ ಶೀಘ್ರವೇ ನಿರ್ಮಾಣವಾಗಲಿದೆ. ಪುತ್ತೂರು ಬಸ್ ನಿಲ್ದಾಣದ ಬಳಿ ಮಹಿಳಾ ಪೊಲೀಸ್ ಠಾಣೆ ನಿರ್ಮಾಣವಾಗುತ್ತಿರುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಅತ್ಯಂತ ಅನುಕೂಲ ಎಂಬ ಮಾತುಗಳು ಕೇಳಿ ಬಂದಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…