ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ಕಾರ್ಮೋಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ದೇಶದ ಎಲ್ಲಾ ಬಂದರುಗಳು, ಟರ್ಮಿನಲ್ಗಳು ಮತ್ತು ಹಡಗುಗಳಲ್ಲಿ ಭದ್ರತೆ ಹೆಚ್ಚಿಸಿದೆ ಎಂದು ವರದಿಯಾಗಿದೆ.
ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವ್ಯವಸ್ಥೆಗಳ ಸುರಕ್ಷತೆಯನ್ನು ಪರಿಶೀಲಿಸಲು ಮತ್ತು ಸೈಬರ್ ದಾಳಿ ಬೆದರಿಕೆಗಳನ್ನು ತಡೆಗಟ್ಟಲು ಅಥವಾ ತಗ್ಗಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಮುಖ್ಯ ಮಾಹಿತಿ ಭದ್ರತಾ ಅಧಿಕಾರಿಗಳಿಗೆ ಡಿಜಿಸಿಎ ಸೂಚನೆ ನೀಡಿದೆ.
ಭದ್ರತಾ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ MARSEC ಹಂತ-1 ರಿಂದ MARSEC ಹಂತ-2 ಕ್ಕೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‘ರಾಷ್ಟ್ರೀಯ ಕಡಲ ಭದ್ರತೆಯ ಹಿತದೃಷ್ಟಿಯಿಂದ ಭದ್ರತಾ ನಿರ್ದೇಶನಗಳನ್ನು ಹೊರಡಿಸಲಾಗಿದೆ. ಈ ನಿರ್ದೇಶನಗಳನ್ನು ಅತ್ಯಂತ ತುರ್ತು ಮತ್ತು ಆದ್ಯತೆಯೊಂದಿಗೆ ಪರಿಗಣಿಸಬೇಕು. ಯಾವುದೇ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ಕ್ಯಾಪ್ಟನ್ ನಿತಿನ್ ಮುಖೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…