ಉಡುಪಿ: ಭಾರತ ಪಾಕ್ ಉದ್ವಿಗ್ನತೆ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ದೇಶದಲ್ಲಿ ಶಾಂತಿ ನೆಲೆಸುವಂತೆ ಮುಸಲ್ಮಾನ ಬಾಂಧವರು ದುಆ ನಿರ್ವಹಿಸಿದರು.ಶತ್ರು ರಾಷ್ಟ್ರದ ಯುದ್ಧದಲ್ಲಿ ದೇಶಕ್ಕೆ ಹಿತವಾಗಬೇಕು, ಆದಷ್ಟು ಬೇಗ ದೇಶ ಮತ್ತೆ ಶಾಂತಿಯತ್ತ ಮರಳಬೇಕು ಎಂದು ಶುಕ್ರವಾರದ ಜುಮಾ ನಮಾಜಿನ ಬಳಿಕ ಧರ್ಮಗುರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು.
ಬಳಿಕ ಮಾತನಾಡಿದ ಮುಸ್ಲಿಂ ಮುಖಂಡ ಇಕ್ಬಾಲ್ ಮನ್ನಾ ಅವರು, ಪೆಹಲ್ಗಾಂ ದಾಳಿಯ ನಂತರ ನಾವು ಪಾಕಿಗಳಿಗೆ ತಕ್ಕ ಪಾಠ ಕಲಿಸಿದ್ದೇವೆ.ಪಾಕಿಸ್ಥಾನಕ್ಕೆ ಹೊಡೆಯಲು ಭಾರತಕ್ಕೆ ಅರ್ಧ ಗಂಟೆ ಸಾಕು.ಪದೇಪದೇ ಜಗಳಕ್ಕೆ ಬರುವ ಪಾಕ್ ಗೆ ತಕ್ಕ ಶಾಸ್ತಿಯಾಗಲಿದೆ.ಈ ಸಂದರ್ಭದಲ್ಲಿ ನಾವೆಲ್ಲ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ.ವಕ್ಫ್ ಇಲಾಖೆಯಿಂದಲೂ ನಮಗೆ ನಿರ್ದೇಶನ ಬಂದಿದೆ.ಅದಕ್ಕೂ ಮುನ್ನವೇ ನಾವು ಪ್ರಾರ್ಥನೆ ಮಾಡಲು ನಿರ್ಧರಿಸಿದ್ದೆವು.ದೇಶಕ್ಕಾಗಿ ದೇಶದ ಜನರ ಒಳಿತಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…