ಉಡುಪಿ: ಭಾರತ ಪಾಕ್ ಉದ್ವಿಗ್ನತೆ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ದೇಶದಲ್ಲಿ ಶಾಂತಿ ನೆಲೆಸುವಂತೆ ಮುಸಲ್ಮಾನ ಬಾಂಧವರು ದುಆ ನಿರ್ವಹಿಸಿದರು.ಶತ್ರು ರಾಷ್ಟ್ರದ ಯುದ್ಧದಲ್ಲಿ ದೇಶಕ್ಕೆ ಹಿತವಾಗಬೇಕು, ಆದಷ್ಟು ಬೇಗ ದೇಶ ಮತ್ತೆ ಶಾಂತಿಯತ್ತ ಮರಳಬೇಕು ಎಂದು ಶುಕ್ರವಾರದ ಜುಮಾ ನಮಾಜಿನ ಬಳಿಕ ಧರ್ಮಗುರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು.
ಬಳಿಕ ಮಾತನಾಡಿದ ಮುಸ್ಲಿಂ ಮುಖಂಡ ಇಕ್ಬಾಲ್ ಮನ್ನಾ ಅವರು, ಪೆಹಲ್ಗಾಂ ದಾಳಿಯ ನಂತರ ನಾವು ಪಾಕಿಗಳಿಗೆ ತಕ್ಕ ಪಾಠ ಕಲಿಸಿದ್ದೇವೆ.ಪಾಕಿಸ್ಥಾನಕ್ಕೆ ಹೊಡೆಯಲು ಭಾರತಕ್ಕೆ ಅರ್ಧ ಗಂಟೆ ಸಾಕು.ಪದೇಪದೇ ಜಗಳಕ್ಕೆ ಬರುವ ಪಾಕ್ ಗೆ ತಕ್ಕ ಶಾಸ್ತಿಯಾಗಲಿದೆ.ಈ ಸಂದರ್ಭದಲ್ಲಿ ನಾವೆಲ್ಲ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ.ವಕ್ಫ್ ಇಲಾಖೆಯಿಂದಲೂ ನಮಗೆ ನಿರ್ದೇಶನ ಬಂದಿದೆ.ಅದಕ್ಕೂ ಮುನ್ನವೇ ನಾವು ಪ್ರಾರ್ಥನೆ ಮಾಡಲು ನಿರ್ಧರಿಸಿದ್ದೆವು.ದೇಶಕ್ಕಾಗಿ ದೇಶದ ಜನರ ಒಳಿತಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…