ಉಡುಪಿ: ಬೇಸಗೆಯ ತಾಪ ಎಲ್ಲೆಡೆ ಪರಿಣಾಮ ಬೀರುತ್ತಿದ್ದು, ಮೀನುಗಾರಿಕಾ ವಲಯಕ್ಕೂ ಬಿಸಿ ತಟ್ಟಿದೆ. ಬಿಸಿಲಿನ ಬೇಗೆಗೆ ತೀರದತ್ತ ಮೀನುಗಳು ಬಾರದೇ ಇರುವುದರಿಂದ ಮೀನುಗಾರಿಕೆಗೆ ಹೊಡೆತ ಬಿದ್ದಿದ್ದು, ಇದರಿಂದ ಬಹುಬೇಡಿಕೆಯ ಮೀನುಗಳ ದರ ದುಬಾರಿಯಾಗಿದೆ.
ಕರಾವಳಿಯಲ್ಲಿಯೇ ಎರಡು- ಮೂರು ದಿನಗಳ ಹಿಂದೆ ಅಂಜಲ್ ಕೆಜಿಗೆ ಬರೋಬ್ಬರಿ 1,800 ರೂ.ಗೆ ತಲುಪಿತ್ತು. ಇದುವರೆಗಿನ ಗರಿಷ್ಠ ಬೆಲೆಯಿದು. ಸದ್ಯ ಮಾರುಕಟ್ಟೆಯಲ್ಲಿ 1,400-1,500 ರೂ.ನಲ್ಲಿ ಮಾರಾಟವಾಗುತ್ತಿದೆ. ಇನ್ನು ಬಿಳಿ ಪಾಂಫ್ರೆಟ್ ಕೆಜಿಗೆ 1,500 ರೂ. ಇದ್ದು, ಇದೂ ಇದುವರೆಗಿನ ದಾಖಲೆಯಾಗಿದೆ.
3 ವರ್ಷಗಳ ಹಿಂದೆ ಅಂಜಲ್ಗೆ 1 ಸಾವಿರ ರೂ. ಇದ್ದರೆ, ಅದೇ ದುಬಾರಿ. ಆದರೆ ಈಗ 1,500 ರೂ. ಗಡಿಯೂ ದಾಟಿ 1,700-1,800 ರೂ.ಗೆ ತಲುಪಿರುವುದು ಅಂಜಲ್ಗೆ ಬರದ ಸಂಕೇತ. ಇನ್ನು ಬಿಳಿ ಪಾಂಫ್ರೆಟ್ಗೆ 700-800 ರೂ. ಆಗಿದ್ದರೆ ಅದುವೇ ಗರಿಷ್ಠ ಆಗಿತ್ತು. ಆದರೆ ಈಗ 1300-1400 ರೂ. ವರೆಗೆ ತಲುಪಿದೆ. 350-400 ರೂ. ಇರುತ್ತಿದ್ದ ಕಪ್ಪು ಪಾಂಫ್ರೆಟ್ಗೆ ಈಗ 750 – 800 ರೂ. ಆಗಿದೆ. ಇನ್ನು ಸಣ್ಣಪುಟ್ಟ ಮೀನುಗಳೂ ಕೈಗೆ ಎಟುಕುತ್ತಿಲ್ಲ. ನಿತ್ಯ ಮೀನು ಸೇವಿಸುವ ಮಂದಿ,ಉರಿಬಿಸಿಲಿಗೆ ಮೀನು ಸಿಕ್ಕಿದರೂ ರುಚಿಯೇ ಇಲ್ಲ ಎನ್ನುತ್ತಿದ್ದಾರೆ. ಒಟ್ಟಾರೆ ಮೀನು ಪ್ರಿಯರಿಗೆ ಸಾಕಷ್ಟು ತೊಂದರೆಯಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…