ಜನ ಮನದ ನಾಡಿ ಮಿಡಿತ

Advertisement

ಐಪಿಎಲ್ ಅಭಿಮಾನಿಗಳಿಗೆ ಸಿಹಿಸುದ್ದಿ.. ಮುಂದಿನ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುತ್ತಾ….?

2025ರ ಐಪಿಎಲ್ ಟೂರ್ನಿಯನ್ನ ಮುಂದಿನ ಒಂದು ವಾರಗಳ ಕಾಲ ಪಂದ್ಯಾಟ ಮುಂದೂಡಲು ಬಿಸಿಸಿಐ ನಿರ್ಧರಿಸಿದ್ದು ನಂತರದ ವೇಳಾಪಟ್ಟಿ, ಟೂರ್ನಿ ನಡೆಯುವ ಸ್ಥಳಗಳ ಮಾಹಿತಿಯನ್ನ ನಂತರದಲ್ಲಿ ನೀಡಲಾಗುವುದು ಎಂದು ಬಿಸಿಸಿಐ ತಿಳಿಸಿದೆ.

ಈ ಕಠಿಣ ಪರಿಸ್ಥಿತಿಯಲ್ಲಿ ಬಿಸಿಸಿಐ ದೇಶದ ಜೊತೆಗೆ ನಿಲ್ಲುತ್ತದೆ ಎಂದು ಭರವಸೆಯನ್ನು ಕೊಟ್ಟಿದೆ ಹಾಗೆಯೇ ಭಾರತ ಸರ್ಕಾರ, ಭಾರತೀಯ ಸೇನೆ, ಹಾಗೂ ಈ ದೇಶದ ಜನರೊಂದಿಗೆ ನಾವು ನಿಲ್ಲುತ್ತೇವೆ ಎಂದು ತಿಳಿಸಿದೆ . ಕ್ರಿಕೆಟ್ ಈ ದೇಶದ ಪ್ಯಾಷನ್. ಈ ದೇಶಕ್ಕಿಂತ ಯಾವುದು ದೊಡ್ಡದಿಲ್ಲ. ಸಶಸ್ತ್ರ ಪಡೆಗಳ ಧೈರ್ಯ, ಶೌರ್ಯ ಮತ್ತು ನಿಸ್ವಾರ್ಥ ಸೇವೆಯನ್ನ ಗೌರವಿಸುತ್ತೇವೆ. ಆಪರೇಷನ್ ಸಿಂಧೂರ ಅಡಿಯಲ್ಲಿ ರಾಷ್ಟ್ರವನ್ನ ರಕ್ಷಿಸುತ್ತಿರೋ ಸೇನೆಗೆ ಸೆಲ್ಯೂಟ್ ಎಂದು ಬಿಸಿಸಿಐ ಹೇಳಿಕೆ ನೀಡಿದೆ. ಒಂದು ವಾರದ ಬಳಿಕ ಪರಿಸ್ಥಿತಿ ಸುದಾರಿಸಿದ್ರೂ ರಿಸ್ಕ್ ತೆಗೆದುಕೊಳ್ಳಲು ಬಿಸಿಸಿಐ ರೆಡಿಯಿಲ್ಲ. ಹೀಗಾಗಿ ಗಡಿ ಭಾಗದ ಬದಲಾಗಿ ಸೌತ್ ಇಂಡಿಯಾದಲ್ಲಿ ಉಳಿದ ಪಂದ್ಯಗಳನ್ನ ಆಯೋಜಿಸೋ ಬಗ್ಗೆ ಚರ್ಚೆ ನಡೆಸಲಾಗತ್ತಿದೆ. ಬೆಂಗಳೂರು, ಹೈದ್ರಾಬಾದ್‌ನಲ್ಲಿ ಬಹುತೇಕ ಉಳಿದ ಪಂದ್ಯಗಳನ್ನ ನಡೆಸೋ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

 

ಒಂದು ವೇಳೆ ಸಾಧ್ಯವಾಗದಿದ್ದರೆ ಸಪ್ಟೆಂಬರ್ ಬಳಿಕವೇ ಐಪಿಎಲ್ ನಡೆಯೋ ಸಾಧ್ಯತೆಯಿದೆ. ಮುಂದಿನ ತಿಂಗಳು ಸೌತ್ ಆಫ್ರಿಕಾ-ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಡೆಯಲಿದೆ. ಭಾರತ ತಂಡ ಇಂಗ್ಲೆ0ಡ್ ಪ್ರವಾಸಕ್ಕೆ ತೆರಳಲಿದೆ. ಅಗಸ್ಟ್ನಲ್ಲಿ ನಡೆಸೋದಾದ್ರೆ ಟೀಮ್ ಇಂಡಿಯಾದ ಬಾಂಗ್ಲಾದೇಶ ಟೂರ್ ಡಿಶೆಡ್ಯೂಲ್ ಮಾಡಬೇಕಾಗುತ್ತದೆ. ಜೊತೆಗೆ ಇಂಗ್ಲೆ0ಡ್ ಹಾಗೂ ಸೌತ್ ಆಫ್ರಿಕಾ ನಡುವೆ ಅಗಸ್ಟ್ನಲ್ಲಿ ವೈಟ್‌ಬಾಲ್ ಸರಣಿಯಿದೆ. ಸೆಪ್ಟೆಂಬರ್‌ನಲ್ಲಿ 2 ವಾರಗಳ ವಿಂಡೋ ಸಿಗಲಿದೆ. ಅದೇ ತಿಂಗಳು ನಡೆಯೋ ಏಷ್ಯಾಕಪ್ ಟೂರ್ನಿಯನ್ನೂ ಕ್ಯಾನ್ಸಲ್ ಮಾಡಿ ಐಪಿಎಲ್ ನಡೆಸೋ ಚರ್ಚೆಯೂ ನಡೀತಾ ಇದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!