2025ರ ಐಪಿಎಲ್ ಟೂರ್ನಿಯನ್ನ ಮುಂದಿನ ಒಂದು ವಾರಗಳ ಕಾಲ ಪಂದ್ಯಾಟ ಮುಂದೂಡಲು ಬಿಸಿಸಿಐ ನಿರ್ಧರಿಸಿದ್ದು ನಂತರದ ವೇಳಾಪಟ್ಟಿ, ಟೂರ್ನಿ ನಡೆಯುವ ಸ್ಥಳಗಳ ಮಾಹಿತಿಯನ್ನ ನಂತರದಲ್ಲಿ ನೀಡಲಾಗುವುದು ಎಂದು ಬಿಸಿಸಿಐ ತಿಳಿಸಿದೆ.
ಈ ಕಠಿಣ ಪರಿಸ್ಥಿತಿಯಲ್ಲಿ ಬಿಸಿಸಿಐ ದೇಶದ ಜೊತೆಗೆ ನಿಲ್ಲುತ್ತದೆ ಎಂದು ಭರವಸೆಯನ್ನು ಕೊಟ್ಟಿದೆ ಹಾಗೆಯೇ ಭಾರತ ಸರ್ಕಾರ, ಭಾರತೀಯ ಸೇನೆ, ಹಾಗೂ ಈ ದೇಶದ ಜನರೊಂದಿಗೆ ನಾವು ನಿಲ್ಲುತ್ತೇವೆ ಎಂದು ತಿಳಿಸಿದೆ . ಕ್ರಿಕೆಟ್ ಈ ದೇಶದ ಪ್ಯಾಷನ್. ಈ ದೇಶಕ್ಕಿಂತ ಯಾವುದು ದೊಡ್ಡದಿಲ್ಲ. ಸಶಸ್ತ್ರ ಪಡೆಗಳ ಧೈರ್ಯ, ಶೌರ್ಯ ಮತ್ತು ನಿಸ್ವಾರ್ಥ ಸೇವೆಯನ್ನ ಗೌರವಿಸುತ್ತೇವೆ. ಆಪರೇಷನ್ ಸಿಂಧೂರ ಅಡಿಯಲ್ಲಿ ರಾಷ್ಟ್ರವನ್ನ ರಕ್ಷಿಸುತ್ತಿರೋ ಸೇನೆಗೆ ಸೆಲ್ಯೂಟ್ ಎಂದು ಬಿಸಿಸಿಐ ಹೇಳಿಕೆ ನೀಡಿದೆ. ಒಂದು ವಾರದ ಬಳಿಕ ಪರಿಸ್ಥಿತಿ ಸುದಾರಿಸಿದ್ರೂ ರಿಸ್ಕ್ ತೆಗೆದುಕೊಳ್ಳಲು ಬಿಸಿಸಿಐ ರೆಡಿಯಿಲ್ಲ. ಹೀಗಾಗಿ ಗಡಿ ಭಾಗದ ಬದಲಾಗಿ ಸೌತ್ ಇಂಡಿಯಾದಲ್ಲಿ ಉಳಿದ ಪಂದ್ಯಗಳನ್ನ ಆಯೋಜಿಸೋ ಬಗ್ಗೆ ಚರ್ಚೆ ನಡೆಸಲಾಗತ್ತಿದೆ. ಬೆಂಗಳೂರು, ಹೈದ್ರಾಬಾದ್ನಲ್ಲಿ ಬಹುತೇಕ ಉಳಿದ ಪಂದ್ಯಗಳನ್ನ ನಡೆಸೋ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಒಂದು ವೇಳೆ ಸಾಧ್ಯವಾಗದಿದ್ದರೆ ಸಪ್ಟೆಂಬರ್ ಬಳಿಕವೇ ಐಪಿಎಲ್ ನಡೆಯೋ ಸಾಧ್ಯತೆಯಿದೆ. ಮುಂದಿನ ತಿಂಗಳು ಸೌತ್ ಆಫ್ರಿಕಾ-ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನಡೆಯಲಿದೆ. ಭಾರತ ತಂಡ ಇಂಗ್ಲೆ0ಡ್ ಪ್ರವಾಸಕ್ಕೆ ತೆರಳಲಿದೆ. ಅಗಸ್ಟ್ನಲ್ಲಿ ನಡೆಸೋದಾದ್ರೆ ಟೀಮ್ ಇಂಡಿಯಾದ ಬಾಂಗ್ಲಾದೇಶ ಟೂರ್ ಡಿಶೆಡ್ಯೂಲ್ ಮಾಡಬೇಕಾಗುತ್ತದೆ. ಜೊತೆಗೆ ಇಂಗ್ಲೆ0ಡ್ ಹಾಗೂ ಸೌತ್ ಆಫ್ರಿಕಾ ನಡುವೆ ಅಗಸ್ಟ್ನಲ್ಲಿ ವೈಟ್ಬಾಲ್ ಸರಣಿಯಿದೆ. ಸೆಪ್ಟೆಂಬರ್ನಲ್ಲಿ 2 ವಾರಗಳ ವಿಂಡೋ ಸಿಗಲಿದೆ. ಅದೇ ತಿಂಗಳು ನಡೆಯೋ ಏಷ್ಯಾಕಪ್ ಟೂರ್ನಿಯನ್ನೂ ಕ್ಯಾನ್ಸಲ್ ಮಾಡಿ ಐಪಿಎಲ್ ನಡೆಸೋ ಚರ್ಚೆಯೂ ನಡೀತಾ ಇದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…