ನಿನ್ನೆಯೂ ಕೂಡ ಪಾಕಿಸ್ತಾನ ನಾಗರಿಕರನ್ನು ಗುರಿಯಾಗಿಸಿ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಅದಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದ್ದು, ಪ್ರತೀಕಾರದ ದಾಳಿ ಮಾಡಿದೆ. ಲಾಹೋರ್, ರಾವಲ್ಪಿಂಡಿಯಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಮಾಹಿತಿ ಕೂಡ ಲಭ್ಯ ಆಗಿದೆ
ಭಾರತದಿಂದ ಕ್ಷಿಪಣಿ ದಾಳಿಯಾಗಿದ್ದು, ಪಾಕಿಸ್ತಾನದ ಮೂರು ವಾಯುನೆಲೆಗಳನ್ನು ಗುರಿಯಾಗಿಸಿಕೊಡು ದಾಳಿ ಮಾಡಲಾಗಿದೆ. ಮುರೀದ್, ನೂರ್ಖಾನ್, ರಫೀಖಿ ವಾಯುನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದ್ದು. ಆ ಮೂಲಕ ಪದೇ ಪದೆ ಕೆಣಕಿದ ಪಾಕ್ಗೆ ಭಾರತ ಖಡಕ್ ತಿರುಗೇಟು ನೀಡಿದೆ. ಪ್ರತಿದಾಳಿಗೆ ಸಂಬಧಿಸಿ ಭಾರತೀಯ ಸೇನೆಯು ಕೆಲವೇ ಕ್ಷಣದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ. ಜಮ್ಮುಕಾಶ್ಮೀರ, ಪಂಜಾಬ್, ರಾಜಸ್ಥಾನ ಹಾಗೂ ಗುಜರಾತ್ನ 20 ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನವು ಸತತ 2ನೇ ದಿನ ಡ್ರೋಣ್ ದಾಳಿಗೆ ವಿಫಲ ಯತ್ನ ನಡೆಸಿದೆ. ಏಕೆಂದರೆ ಪಾಕಿಸ್ತಾನದ ಡ್ರೋಣ್ಗಳು ಗುರಿ ಮುಟ್ಟುವ ಮೊದಲೇ ಭಾರತೀಯ ವಾಯು ಸೇನೆ ಹೊಡೆದುರುಳಿಸಿ ನೆಲಕ್ಕೆ ಕೆಡವಿವೆ. ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್, ಅವಂತಿಪೋರಾದ ವಾಯುನೆಲೆಯ ಮೇಲೆ ಗುರಿಯಾಗಿರಿಸಿಕೊಂಡು ದಾಳಿಗೆ ಯತ್ನಿಸಿತ್ತು. ಆದರೆ ಇದನ್ನು ಮೊದಲೇ ಮನಗಂಡಿದ್ದ ಭಾರತೀಯ ವಾಯು ಸೇನೆ, ಪಾಕಿಸ್ತಾನದ ಎಲ್ಲ ಡ್ರೋನ್ಗಳನ್ನು ಛಿದ್ರಛಿದ್ರ ಮಾಡಿದೆ. ಇದರಿಂದ ಬಂದ ದಾರಿಗೆ ಸುಂಕವಿಲ್ಲ ಎಂದು ಪಾಕ್ ಕೊರಗುತ್ತಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…