ಜನ ಮನದ ನಾಡಿ ಮಿಡಿತ

Advertisement

ಚಿಕ್ಕೋಡಿ: ಮದುವೆ ಆದ ಮೂರೇ ದಿನಕ್ಕೆ ದೇಶ ಕಾಯಲು ಪತಿಯನ್ನು ಕಳುಹಿಸಿದ ಪತ್ನಿ

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಹೊತ್ತಲ್ಲಿ ಮದುವೆಯಾದ ಮೂರೇ ದಿನಕ್ಕೆ ಸೈನಿಕರೊಬ್ಬರು ದೇಶ ಸೇವೆಗೆ ವಾಪಸ್ ತೆರಳಿದ್ದಾರೆ.

ಹೌದು, ಮಹಾರಾಷ್ಟ್ರದ ಜಳಗಾಂವ್‌ನ ಪಾಚೋರಾದ ಯೋಧ ಮನೋಜ್ ಪಾಟೀಲ್ ಮದುವೆ ಇದೇ ಮೇಲೆ 5ರಂದು ಅದ್ದೂರಿಯಾಗಿ ನೆರವೇರಿತು. ಇತ್ತ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿದ್ರೆ, ಅತ್ತ ಭಾರತ-ಪಾಕ್ ಗಡಿಯಲ್ಲಿ ಆಕ್ರಮಣಕಾರಿ ದಾಳಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮನೋಜ್ ಕುಮಾರ್‌ಗೆ ತುರ್ತಾಗಿ ಸೇನೆಯಿಂದ ಕರೆ ಬಂದಿದೆ. ಮಹಾರಾಷ್ಟ್ರದ ಮನೋಜ್ ಪಾಟೀಲ್ ಹಾಗೂ ನಾಚಂಖೇಡೆಯ ರಾಮಚಂದ್ರ ಪಾಟೀಲ್ ಅವರ ಪುತ್ರಿ ಯಾಮಿನಿ ಅವರಿಗೆ ಮೇ.5 ರಂದು ಅದ್ದೂರಿ ಮದುವೆ ನಿಶ್ಚಯವಾಗಿತ್ತು. ಇದರಿಂದಾಗಿ ಮನೋಜ್ ರಜೆ ಹಾಕಿ ಹಳ್ಳಿಗೆ ಬಂದಿದ್ರು. ಇತ್ತ ಮದುವೆ ಸಂಭ್ರಮದ ನಡುವೆಯೇ ಯೋಧ ಮನೋಜ್ ಪಾಟೀಲ್ ಅವರಿಗೆ ಸೇನೆಯಿಂದ ಕರೆ ಬಂದಿತ್ತು. ತುರ್ತಾಗಿ ಸೇನೆಯಲ್ಲಿ ಸೇರಿಕೊಳ್ಳುವಂತೆ ಸೂಚಿಸಲಾಗಿತ್ತು. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಯುದ್ಧದ ಆತಂಕ ಶುರುವಾಯಿತು.

ಇತ್ತ ಮದುವೆಯಾದ ಮೂರನೇ ದಿನ ಮಗನನ್ನ ಸೇನೆಗೆ ಕಳುಹಿಸಬೇಕಲ್ಲಾ ಎಂದು ಪೋಷಕರು ಚಿಂತಿತರಾಗಿದ್ರೆ, ಪತಿಯೊಂದಿಗೆ ಜೀವನದ ಸುಂದರ ಕನಸು ಕಂಡಿದ್ದ ಪತ್ನಿ ಯಾಮಿನಿ ಕಣ್ಣೀರಿಡುತ್ತಾ ಮೌನಕ್ಕೆ ಜಾರಿದ್ದರು. ಈ ವೇಳೆ ಮನೋಜ್ ಪಾಟೀಲ್ ಏನು ಮಾಡಲಾಗದೇ ಸೇನೆಗೆ ಹೊರಟು ನಿಂತ್ರೆ, ಯೋಧನ ಕೈ ಹಿಡಿದ ಸಂಗಾತಿ ಆತನಿಗೆ ಧೈರ್ಯ ತುಂಬುತ್ತಾ ನನಗೆ ದೇಶ ಸೇವೆ ಮುಖ್ಯ. ನನ್ನ ಕುಂಕುಮವನ್ನು ಗಡಿಗೆ ಕಳಿಸುತ್ತಿರುವುದು ನನಗೆ ಹೆಮ್ಮೆ ಇದೆ ಎಂದು ಕಣ್ಣೀರು ಹಾಕಿದ್ದಾರೆ. ಇದೀಗ ಮೇ.8ನೇ ತಾರೀಕು ಮನೋಜ್ ಪಾಟೀಲ್ ದೇಶ ಸೇವೆಗೆ ಹೊರಡುವ ಸಮಯ ಬಂದೇ ಬಿಟ್ಟಿತು. ಒಂದು ಕಡೆ ಮನೆಯವರು ಮದುವೆಯ ಮೂರನೇ ದಿನಕ್ಕೆ ಗಡಿಗೆ ಕಳುಹಿಸಲು ಇಷ್ಟವಿಲ್ಲದಿದ್ದರೂ,ದೇಶ ಸೇವೆಯೇ ಮುಖ್ಯ ಅಂತ ಮಗನ ಜೊತೆ ನಿಂತರು. ಇತ್ತ ಪತ್ನಿ ಕೂಡ ಗಂಡನಿಗೆ ಧೈರ್ಯ ಹೇಳುತ್ತಾ ರೈಲ್ವೇ ನಿಲ್ದಾಣದ ಕಡೆಗೆ ಹೊರಟು ಬಿಟ್ಟರು. ಯೋಧ ಮನೋಜ್ ಪಾಟೀಲ್ ಅರಿಶಿನ ಹಚ್ಚಿದ ದೇಹ, ಕೈಯಲ್ಲಿ ಮೆಹಂದಿಯೊAದಿಗೆ ಗಡಿಗೆ ದೇಶ ಸೇವೆಗೆ ಹೊರಟರು. ಈ ವೇಳೆ ಪತ್ನಿ ದೇಶ ಸೇವೆಗೆ ಹೊರಡುತ್ತಿರುವ ಪತಿಗೆ ಕಣ್ಣೀರ ವಿದಾಯ ಹೇಳಿದ್ದು, ಒಂದು ಕ್ಷಣ ಇಡೀ ರೈಲ್ವೇ ನಿಲ್ದಾಣವೇ ಕಣ್ಣೀರ ಕಡಲಲ್ಲಿ ಮುಳುಗಿತು.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!