ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಹೊತ್ತಲ್ಲಿ ಮದುವೆಯಾದ ಮೂರೇ ದಿನಕ್ಕೆ ಸೈನಿಕರೊಬ್ಬರು ದೇಶ ಸೇವೆಗೆ ವಾಪಸ್ ತೆರಳಿದ್ದಾರೆ.
ಹೌದು, ಮಹಾರಾಷ್ಟ್ರದ ಜಳಗಾಂವ್ನ ಪಾಚೋರಾದ ಯೋಧ ಮನೋಜ್ ಪಾಟೀಲ್ ಮದುವೆ ಇದೇ ಮೇಲೆ 5ರಂದು ಅದ್ದೂರಿಯಾಗಿ ನೆರವೇರಿತು. ಇತ್ತ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿದ್ರೆ, ಅತ್ತ ಭಾರತ-ಪಾಕ್ ಗಡಿಯಲ್ಲಿ ಆಕ್ರಮಣಕಾರಿ ದಾಳಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮನೋಜ್ ಕುಮಾರ್ಗೆ ತುರ್ತಾಗಿ ಸೇನೆಯಿಂದ ಕರೆ ಬಂದಿದೆ. ಮಹಾರಾಷ್ಟ್ರದ ಮನೋಜ್ ಪಾಟೀಲ್ ಹಾಗೂ ನಾಚಂಖೇಡೆಯ ರಾಮಚಂದ್ರ ಪಾಟೀಲ್ ಅವರ ಪುತ್ರಿ ಯಾಮಿನಿ ಅವರಿಗೆ ಮೇ.5 ರಂದು ಅದ್ದೂರಿ ಮದುವೆ ನಿಶ್ಚಯವಾಗಿತ್ತು. ಇದರಿಂದಾಗಿ ಮನೋಜ್ ರಜೆ ಹಾಕಿ ಹಳ್ಳಿಗೆ ಬಂದಿದ್ರು. ಇತ್ತ ಮದುವೆ ಸಂಭ್ರಮದ ನಡುವೆಯೇ ಯೋಧ ಮನೋಜ್ ಪಾಟೀಲ್ ಅವರಿಗೆ ಸೇನೆಯಿಂದ ಕರೆ ಬಂದಿತ್ತು. ತುರ್ತಾಗಿ ಸೇನೆಯಲ್ಲಿ ಸೇರಿಕೊಳ್ಳುವಂತೆ ಸೂಚಿಸಲಾಗಿತ್ತು. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಯುದ್ಧದ ಆತಂಕ ಶುರುವಾಯಿತು.
ಇತ್ತ ಮದುವೆಯಾದ ಮೂರನೇ ದಿನ ಮಗನನ್ನ ಸೇನೆಗೆ ಕಳುಹಿಸಬೇಕಲ್ಲಾ ಎಂದು ಪೋಷಕರು ಚಿಂತಿತರಾಗಿದ್ರೆ, ಪತಿಯೊಂದಿಗೆ ಜೀವನದ ಸುಂದರ ಕನಸು ಕಂಡಿದ್ದ ಪತ್ನಿ ಯಾಮಿನಿ ಕಣ್ಣೀರಿಡುತ್ತಾ ಮೌನಕ್ಕೆ ಜಾರಿದ್ದರು. ಈ ವೇಳೆ ಮನೋಜ್ ಪಾಟೀಲ್ ಏನು ಮಾಡಲಾಗದೇ ಸೇನೆಗೆ ಹೊರಟು ನಿಂತ್ರೆ, ಯೋಧನ ಕೈ ಹಿಡಿದ ಸಂಗಾತಿ ಆತನಿಗೆ ಧೈರ್ಯ ತುಂಬುತ್ತಾ ನನಗೆ ದೇಶ ಸೇವೆ ಮುಖ್ಯ. ನನ್ನ ಕುಂಕುಮವನ್ನು ಗಡಿಗೆ ಕಳಿಸುತ್ತಿರುವುದು ನನಗೆ ಹೆಮ್ಮೆ ಇದೆ ಎಂದು ಕಣ್ಣೀರು ಹಾಕಿದ್ದಾರೆ. ಇದೀಗ ಮೇ.8ನೇ ತಾರೀಕು ಮನೋಜ್ ಪಾಟೀಲ್ ದೇಶ ಸೇವೆಗೆ ಹೊರಡುವ ಸಮಯ ಬಂದೇ ಬಿಟ್ಟಿತು. ಒಂದು ಕಡೆ ಮನೆಯವರು ಮದುವೆಯ ಮೂರನೇ ದಿನಕ್ಕೆ ಗಡಿಗೆ ಕಳುಹಿಸಲು ಇಷ್ಟವಿಲ್ಲದಿದ್ದರೂ,ದೇಶ ಸೇವೆಯೇ ಮುಖ್ಯ ಅಂತ ಮಗನ ಜೊತೆ ನಿಂತರು. ಇತ್ತ ಪತ್ನಿ ಕೂಡ ಗಂಡನಿಗೆ ಧೈರ್ಯ ಹೇಳುತ್ತಾ ರೈಲ್ವೇ ನಿಲ್ದಾಣದ ಕಡೆಗೆ ಹೊರಟು ಬಿಟ್ಟರು. ಯೋಧ ಮನೋಜ್ ಪಾಟೀಲ್ ಅರಿಶಿನ ಹಚ್ಚಿದ ದೇಹ, ಕೈಯಲ್ಲಿ ಮೆಹಂದಿಯೊAದಿಗೆ ಗಡಿಗೆ ದೇಶ ಸೇವೆಗೆ ಹೊರಟರು. ಈ ವೇಳೆ ಪತ್ನಿ ದೇಶ ಸೇವೆಗೆ ಹೊರಡುತ್ತಿರುವ ಪತಿಗೆ ಕಣ್ಣೀರ ವಿದಾಯ ಹೇಳಿದ್ದು, ಒಂದು ಕ್ಷಣ ಇಡೀ ರೈಲ್ವೇ ನಿಲ್ದಾಣವೇ ಕಣ್ಣೀರ ಕಡಲಲ್ಲಿ ಮುಳುಗಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…