ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಹೊತ್ತಲ್ಲಿ ಮದುವೆಯಾದ ಮೂರೇ ದಿನಕ್ಕೆ ಸೈನಿಕರೊಬ್ಬರು ದೇಶ ಸೇವೆಗೆ ವಾಪಸ್ ತೆರಳಿದ್ದಾರೆ.
ಹೌದು, ಮಹಾರಾಷ್ಟ್ರದ ಜಳಗಾಂವ್ನ ಪಾಚೋರಾದ ಯೋಧ ಮನೋಜ್ ಪಾಟೀಲ್ ಮದುವೆ ಇದೇ ಮೇಲೆ 5ರಂದು ಅದ್ದೂರಿಯಾಗಿ ನೆರವೇರಿತು. ಇತ್ತ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿದ್ರೆ, ಅತ್ತ ಭಾರತ-ಪಾಕ್ ಗಡಿಯಲ್ಲಿ ಆಕ್ರಮಣಕಾರಿ ದಾಳಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮನೋಜ್ ಕುಮಾರ್ಗೆ ತುರ್ತಾಗಿ ಸೇನೆಯಿಂದ ಕರೆ ಬಂದಿದೆ. ಮಹಾರಾಷ್ಟ್ರದ ಮನೋಜ್ ಪಾಟೀಲ್ ಹಾಗೂ ನಾಚಂಖೇಡೆಯ ರಾಮಚಂದ್ರ ಪಾಟೀಲ್ ಅವರ ಪುತ್ರಿ ಯಾಮಿನಿ ಅವರಿಗೆ ಮೇ.5 ರಂದು ಅದ್ದೂರಿ ಮದುವೆ ನಿಶ್ಚಯವಾಗಿತ್ತು. ಇದರಿಂದಾಗಿ ಮನೋಜ್ ರಜೆ ಹಾಕಿ ಹಳ್ಳಿಗೆ ಬಂದಿದ್ರು. ಇತ್ತ ಮದುವೆ ಸಂಭ್ರಮದ ನಡುವೆಯೇ ಯೋಧ ಮನೋಜ್ ಪಾಟೀಲ್ ಅವರಿಗೆ ಸೇನೆಯಿಂದ ಕರೆ ಬಂದಿತ್ತು. ತುರ್ತಾಗಿ ಸೇನೆಯಲ್ಲಿ ಸೇರಿಕೊಳ್ಳುವಂತೆ ಸೂಚಿಸಲಾಗಿತ್ತು. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಯುದ್ಧದ ಆತಂಕ ಶುರುವಾಯಿತು.
ಇತ್ತ ಮದುವೆಯಾದ ಮೂರನೇ ದಿನ ಮಗನನ್ನ ಸೇನೆಗೆ ಕಳುಹಿಸಬೇಕಲ್ಲಾ ಎಂದು ಪೋಷಕರು ಚಿಂತಿತರಾಗಿದ್ರೆ, ಪತಿಯೊಂದಿಗೆ ಜೀವನದ ಸುಂದರ ಕನಸು ಕಂಡಿದ್ದ ಪತ್ನಿ ಯಾಮಿನಿ ಕಣ್ಣೀರಿಡುತ್ತಾ ಮೌನಕ್ಕೆ ಜಾರಿದ್ದರು. ಈ ವೇಳೆ ಮನೋಜ್ ಪಾಟೀಲ್ ಏನು ಮಾಡಲಾಗದೇ ಸೇನೆಗೆ ಹೊರಟು ನಿಂತ್ರೆ, ಯೋಧನ ಕೈ ಹಿಡಿದ ಸಂಗಾತಿ ಆತನಿಗೆ ಧೈರ್ಯ ತುಂಬುತ್ತಾ ನನಗೆ ದೇಶ ಸೇವೆ ಮುಖ್ಯ. ನನ್ನ ಕುಂಕುಮವನ್ನು ಗಡಿಗೆ ಕಳಿಸುತ್ತಿರುವುದು ನನಗೆ ಹೆಮ್ಮೆ ಇದೆ ಎಂದು ಕಣ್ಣೀರು ಹಾಕಿದ್ದಾರೆ. ಇದೀಗ ಮೇ.8ನೇ ತಾರೀಕು ಮನೋಜ್ ಪಾಟೀಲ್ ದೇಶ ಸೇವೆಗೆ ಹೊರಡುವ ಸಮಯ ಬಂದೇ ಬಿಟ್ಟಿತು. ಒಂದು ಕಡೆ ಮನೆಯವರು ಮದುವೆಯ ಮೂರನೇ ದಿನಕ್ಕೆ ಗಡಿಗೆ ಕಳುಹಿಸಲು ಇಷ್ಟವಿಲ್ಲದಿದ್ದರೂ,ದೇಶ ಸೇವೆಯೇ ಮುಖ್ಯ ಅಂತ ಮಗನ ಜೊತೆ ನಿಂತರು. ಇತ್ತ ಪತ್ನಿ ಕೂಡ ಗಂಡನಿಗೆ ಧೈರ್ಯ ಹೇಳುತ್ತಾ ರೈಲ್ವೇ ನಿಲ್ದಾಣದ ಕಡೆಗೆ ಹೊರಟು ಬಿಟ್ಟರು. ಯೋಧ ಮನೋಜ್ ಪಾಟೀಲ್ ಅರಿಶಿನ ಹಚ್ಚಿದ ದೇಹ, ಕೈಯಲ್ಲಿ ಮೆಹಂದಿಯೊAದಿಗೆ ಗಡಿಗೆ ದೇಶ ಸೇವೆಗೆ ಹೊರಟರು. ಈ ವೇಳೆ ಪತ್ನಿ ದೇಶ ಸೇವೆಗೆ ಹೊರಡುತ್ತಿರುವ ಪತಿಗೆ ಕಣ್ಣೀರ ವಿದಾಯ ಹೇಳಿದ್ದು, ಒಂದು ಕ್ಷಣ ಇಡೀ ರೈಲ್ವೇ ನಿಲ್ದಾಣವೇ ಕಣ್ಣೀರ ಕಡಲಲ್ಲಿ ಮುಳುಗಿತು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…