ಕ್ರೈಮ್

ಮೇ.11ರಂದು ಸುಹಾಸ್ ಶೆಟ್ಟಿ ನಿವಾಸಕ್ಕೆ ಜೆ.ಪಿ.ನಡ್ಡಾ ಭೇಟಿ…!

ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಹಾಸ್ ಶೆಟ್ಟಿ ಹೆತ್ತವರು ದ.ಕ., ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರ ನಿಯೋಗದೊಂದಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಸಭಾ ವಿಪಕ್ಷ ನಾಯಕ ಆರ್. ಅಶೋಕ್, ಉಪನಾಯಕ ಅರವಿಂದ ಬೆಲ್ಲದ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ನಿಯೋಗದ ನೇತೃತ್ವವನ್ನು ವಹಿಸಿದ್ರು. ಗುರುವಾರ ಸಂಸದರು ಹಾಗೂ ಶಾಸಕರ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್ ಅರ್ಗವಾಲ್ ಅವರನ್ನು ಭೇಟಿ ಸುಹಾಸ್ ಕೊಲೆ ಹಿಂದಿರುವ ಕೆಲವೊಂದು ಅನುಮಾನಗಳ ಬಗ್ಗೆ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಒತ್ತಾಯಿಸಿತ್ತು. ಈ ನಡುವೆ ಬಿಜೆಪಿ ರಾಷ್ಟ್ರೀಯಾಧ್ಯಕ್ಷ, ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಮೇ.11ರಂದು ಸುಹಾಸ್ ಶೆಟ್ಟಿ ನಿವಾಸಕ್ಕಾಗಮಿಸಿ ಹೆತ್ತವರಿಗೆ ಸಾಂತ್ವನ ಹೇಳಲಿದ್ದಾರೆ.

 

ಸುಹಾಸ್ ಶೆಟ್ಟಿ ಹತ್ಯೆಗೆ ಸಂಬAಧಿಸಿ ಇದುವರೆಗೆ 8 ಮಂದಿ ಹಂತಕರನ್ನು ಬಂಧಿಸಲಾಗಿದ್ದು, ಇನ್ನಷ್ಟು ಮಂದಿ ಈ ಕೃತ್ಯ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಶಾಮೀಲಾಗಿದ್ದಾರೆಂಬ ಹಿನ್ನಲೆಯಲ್ಲಿ ಮತ್ತು ವಿದೇಶದಿಂದಲು 50 ಲಕ್ಷಕ್ಕೂ ಹೆಚ್ಚು ಹಣ ಹರಿದುಬಂದಿದೆ ಎಂಬ ಆರೋಪವಿರುವುದರಿಂದ ಪ್ರಕರಣದ ತನಿಖೆಯನ್ನು ಎನ್‌ಐಎಯಿಂದ ತನಿಖೆ ನಡೆಸಬೇಕು. ಸುಹಾಸ್ ಹೆತ್ತವರು ಹಾಗೂ ಕುಟುಂಬಸ್ಥರು ಒತ್ತಾಯಿಸುತ್ತಲೇ ಇದ್ದು ಕರ್ನಾಟಕ ಸರಕಾರ ಪ್ರಕರಣವನ್ನು ಪೊಲೀಸರಿಂದಲೇ ತನಿಖೆ ನಡೆಸಲು ಹಠಕ್ಕೆ ಬಿದ್ದಿದೆ. ಹಾಗಾಗಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಈ ಕೃತ್ಯದ ತನಿಖೆಯನ್ನು ಎನ್‌ಐಎಗೆ ಒಪ್ಪಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮೂಲಕ ಒತ್ತಾಯಿಸಲಾಗಿದೆ.

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

10 hours ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

10 hours ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

1 day ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

1 day ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

1 day ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

1 day ago