ಕ್ರೈಮ್

ಮೇ.11ರಂದು ಸುಹಾಸ್ ಶೆಟ್ಟಿ ನಿವಾಸಕ್ಕೆ ಜೆ.ಪಿ.ನಡ್ಡಾ ಭೇಟಿ…!

ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಹಾಸ್ ಶೆಟ್ಟಿ ಹೆತ್ತವರು ದ.ಕ., ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರ ನಿಯೋಗದೊಂದಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಸಭಾ ವಿಪಕ್ಷ ನಾಯಕ ಆರ್. ಅಶೋಕ್, ಉಪನಾಯಕ ಅರವಿಂದ ಬೆಲ್ಲದ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ನಿಯೋಗದ ನೇತೃತ್ವವನ್ನು ವಹಿಸಿದ್ರು. ಗುರುವಾರ ಸಂಸದರು ಹಾಗೂ ಶಾಸಕರ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್ ಅರ್ಗವಾಲ್ ಅವರನ್ನು ಭೇಟಿ ಸುಹಾಸ್ ಕೊಲೆ ಹಿಂದಿರುವ ಕೆಲವೊಂದು ಅನುಮಾನಗಳ ಬಗ್ಗೆ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಒತ್ತಾಯಿಸಿತ್ತು. ಈ ನಡುವೆ ಬಿಜೆಪಿ ರಾಷ್ಟ್ರೀಯಾಧ್ಯಕ್ಷ, ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಮೇ.11ರಂದು ಸುಹಾಸ್ ಶೆಟ್ಟಿ ನಿವಾಸಕ್ಕಾಗಮಿಸಿ ಹೆತ್ತವರಿಗೆ ಸಾಂತ್ವನ ಹೇಳಲಿದ್ದಾರೆ.

 

ಸುಹಾಸ್ ಶೆಟ್ಟಿ ಹತ್ಯೆಗೆ ಸಂಬAಧಿಸಿ ಇದುವರೆಗೆ 8 ಮಂದಿ ಹಂತಕರನ್ನು ಬಂಧಿಸಲಾಗಿದ್ದು, ಇನ್ನಷ್ಟು ಮಂದಿ ಈ ಕೃತ್ಯ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಶಾಮೀಲಾಗಿದ್ದಾರೆಂಬ ಹಿನ್ನಲೆಯಲ್ಲಿ ಮತ್ತು ವಿದೇಶದಿಂದಲು 50 ಲಕ್ಷಕ್ಕೂ ಹೆಚ್ಚು ಹಣ ಹರಿದುಬಂದಿದೆ ಎಂಬ ಆರೋಪವಿರುವುದರಿಂದ ಪ್ರಕರಣದ ತನಿಖೆಯನ್ನು ಎನ್‌ಐಎಯಿಂದ ತನಿಖೆ ನಡೆಸಬೇಕು. ಸುಹಾಸ್ ಹೆತ್ತವರು ಹಾಗೂ ಕುಟುಂಬಸ್ಥರು ಒತ್ತಾಯಿಸುತ್ತಲೇ ಇದ್ದು ಕರ್ನಾಟಕ ಸರಕಾರ ಪ್ರಕರಣವನ್ನು ಪೊಲೀಸರಿಂದಲೇ ತನಿಖೆ ನಡೆಸಲು ಹಠಕ್ಕೆ ಬಿದ್ದಿದೆ. ಹಾಗಾಗಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಈ ಕೃತ್ಯದ ತನಿಖೆಯನ್ನು ಎನ್‌ಐಎಗೆ ಒಪ್ಪಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮೂಲಕ ಒತ್ತಾಯಿಸಲಾಗಿದೆ.

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

23 hours ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

23 hours ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

23 hours ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

23 hours ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago