‘ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ಆಗಿದೆ ಎಂಬುದೂ ಮುಖ್ಯವಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಂಗಳೂರಿನಲ್ಲಿ ಇಂದು (ಶನಿವಾರ)ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಬಜಪೆ ಬಳಿ ಈಚೆಗೆ ಹತ್ಯೆಗೀಡಾದ ಹಿಂದುತ್ವ ಪರ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಮನೆಗೆ ಸಚಿವರು ಭೇಟಿ ನೀಡಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದರು.
ಪೊಲೀಸರು ಅಪರಾಧಿಗಳನ್ನು ಈಗಾಗಲೇ ಪತ್ತೆ ಹಚ್ಚಿದ್ದಾರೆ. ಮುಂದೆ ಎನ್ಐಎ ತನಿಖೆಗೆ ಇದನ್ನು ನೀಡಬೇಕೋ? ಬೇಡವೋ? ಎನ್ನುವ ತೀರ್ಮಾನವನ್ನು ಗೃಹ ಇಲಾಖೆ ತೆಗೆದುಕೊಳ್ಳಲಿದೆ. ಸರಕಾರದಿಂದ ಈಗಾಗಲೇ ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಉಳಿದ ಅಪರಾಧಿಗಳ ಪತ್ತೆ ಕಾರ್ಯವು ನಡೆಯುತ್ತಲೇ ಇದೆ. ವಿರೋಧಿಗಳ ಊಹಾಪೂಹಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಮೂಲವನ್ನು ಭೇದಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಸರಕಾರ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿದೆ. ಯಾರಿಗೂ ಕೂಡ ರಕ್ಷಣೆಯನ್ನು ನೀಡುವ ಕೆಲಸವನ್ನು ಸರಕಾರ ಮಾಡುತ್ತಾ ಇಲ್ಲ. ದಿಟ್ಟ ಕ್ರಮದಿಂದ ಅಪರಾಧಿಗಳ ಪತ್ತೆಯಾಗಿದೆ. ಯಾವ ಪುರಾವೆಗಳು ಇಲ್ಲದೆ ಮಾತನಾಡುವವರ ಕುರಿತು ಚಿಂತಿಸುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಹತ್ಯೆ ನಡೆದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಿದ್ದಾರೆ. ಕೆಲವೊಬ್ಬರು ನಕಲಿ ಹೆಸರಲ್ಲಿ ಖಾತೆ ಬಳಸುತ್ತಿದ್ದು, ಅವರು ಯಾರು ಎಂಬುದು ತಕ್ಷಣಕ್ಕೆ ಗೊತ್ತಾಗುವುದಿಲ್ಲ. ಸಂಬಂಧಿಸಿದ ಸಂಸ್ಥೆಗಳಿಗೆ ಪತ್ರ ಬರೆದು ಮಾಹಿತಿ ತಿಳಿದುಕೊಂಡು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಈ ಕ್ಷಣ ಮಾತನಾಡಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…