ಸಿಬಿಐ ಕೋರ್ಟ್ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.
ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿತ್ತು.
ಜನಪ್ರನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಸದಸ್ಯತ್ವ ರದ್ದಾಗಲಿದೆ. ಜನಾರ್ದನ ರೆಡ್ಡಿ ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…