ಉಡುಪಿ: ನಿನ್ನೆ ರಾತ್ರಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದ ಹಾಸ್ಯ ನಟ ರಾಕೇಶ್ ಪೂಜಾರಿ ಮೃತದೇಹ ಕೆಮ್ಮಣ್ಣುವಿನ ಪಡುತೋನ್ಸೆಯ ಮನೆಗೆ ತಲುಪಿದೆ. ಮೃತ ಕಾಮಿಡಿ ಕಿಲಾಡಿ- 3ರ ವಿನ್ನರ್ ರಾಕೇಶ್ ಮನೆಗೆ ನೂರಾರು ಅಭಿಮಾನಿಗಳು, ಗ್ರಾಮಸ್ಥರು, ಕುಟುಂಬಸ್ಥರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಕಿರುತರೆ ನಟ ನಟಿಯರು, ರಾಕೇಶ್ ಆಪ್ತರು ಕೂಡ ಅಂತಿಮ ನಮನ ಸಲ್ಲಿಸಿದರು.
ತಾಯಿ ಶಾಂಭವಿ, ಸಹೋದರಿ ರಕ್ಷತಾ, ರಾಕೇಶ್ ಅವರ ಅಕಾಲಿಕ ಮರಣದಿಂದ ತೀವ್ರ ನೊಂದಿದ್ದು ಮನೆಯಲ್ಲಿ ಸೂತಕದ ವಾರಾವರಣ ನಿರ್ಮಾಣವಾಗಿದೆ. ನಟಿ ನಯನ, ಸೂರ್ಯ ಕುಂದಾಪುರ, ದೀಕ್ಷಿತ್ ಪ್ರವೀಣ್, ದೀಪಿಕಾ, ವಾಣಿ, ಉಮೇಶ್ ಕಿನ್ಮಾರ, ಸೂರಜ್, ಜೀ ಮೆಂಟರ್ ವಿಜಯ್ ಶೆಟ್ಟಿ ಮತ್ತಿತರ ಗಣ್ಯರು, ನಟರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಸದ್ಯ ಕೆಮ್ಮಣ್ಣುವಿನ ಮನೆಯಲ್ಲಿ ಮೃತದೇಹದ ಅಂತಿಮ ವಿಧಿವಿಧಾನ ನಡೆಯುತ್ತಿದ್ದು ಇಂದು ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…