ಉಡುಪಿ: ನಿನ್ನೆ ರಾತ್ರಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದ ಹಾಸ್ಯ ನಟ ರಾಕೇಶ್ ಪೂಜಾರಿ ಮೃತದೇಹ ಕೆಮ್ಮಣ್ಣುವಿನ ಪಡುತೋನ್ಸೆಯ ಮನೆಗೆ ತಲುಪಿದೆ. ಮೃತ ಕಾಮಿಡಿ ಕಿಲಾಡಿ- 3ರ ವಿನ್ನರ್ ರಾಕೇಶ್ ಮನೆಗೆ ನೂರಾರು ಅಭಿಮಾನಿಗಳು, ಗ್ರಾಮಸ್ಥರು, ಕುಟುಂಬಸ್ಥರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಕಿರುತರೆ ನಟ ನಟಿಯರು, ರಾಕೇಶ್ ಆಪ್ತರು ಕೂಡ ಅಂತಿಮ ನಮನ ಸಲ್ಲಿಸಿದರು.
ತಾಯಿ ಶಾಂಭವಿ, ಸಹೋದರಿ ರಕ್ಷತಾ, ರಾಕೇಶ್ ಅವರ ಅಕಾಲಿಕ ಮರಣದಿಂದ ತೀವ್ರ ನೊಂದಿದ್ದು ಮನೆಯಲ್ಲಿ ಸೂತಕದ ವಾರಾವರಣ ನಿರ್ಮಾಣವಾಗಿದೆ. ನಟಿ ನಯನ, ಸೂರ್ಯ ಕುಂದಾಪುರ, ದೀಕ್ಷಿತ್ ಪ್ರವೀಣ್, ದೀಪಿಕಾ, ವಾಣಿ, ಉಮೇಶ್ ಕಿನ್ಮಾರ, ಸೂರಜ್, ಜೀ ಮೆಂಟರ್ ವಿಜಯ್ ಶೆಟ್ಟಿ ಮತ್ತಿತರ ಗಣ್ಯರು, ನಟರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಸದ್ಯ ಕೆಮ್ಮಣ್ಣುವಿನ ಮನೆಯಲ್ಲಿ ಮೃತದೇಹದ ಅಂತಿಮ ವಿಧಿವಿಧಾನ ನಡೆಯುತ್ತಿದ್ದು ಇಂದು ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…