ಜನ ಮನದ ನಾಡಿ ಮಿಡಿತ

Advertisement

ಕುಕ್ಕೆ ಸುಬ್ರಹ್ಮಣ್ಯ; ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧ ಆಯ್ಕೆ

ಕಡಬ:ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ನಿನ್ನೆ ಮಹೇಶ್ ಕುಮಾರ್ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್ ಸೂಚಿಸಿತ್ತು. ಆದರೆ ಇಂದು ಇದಕ್ಕೆ ಹರೀಶ್ ಇಂಜಾಡಿ, ಅಶೋಕ್ ನೆಕ್ರಾಜೆ ಬಂಡೆದ್ದು ಸ್ಪರ್ಧೆ ನಡೆಸುವ ಸಾಧ್ಯತೆ ಎದುರಾಯಿತು.

ಈ ಹಿನ್ನೆಲೆಯಲ್ಲಿ ನೇಮಕಗೊಂಡ ಸದಸ್ಯರು ಮಾತ್ರ ಇದ್ದು ಸಮಾಲೋಚನೆ ನಡೆಯಿತು. ಇದು ಒಂದು ಗಂಟೆಯಾದರೂ ಮುಗಿಯದಿದ್ದಾಗ ಹೊರಗೆ ಕಾಯುತ್ತಿದ್ದ ಕೆಲವರು ಒಳಕ್ಕೆ ಹೋಗಿ ಮಾತನಾಡಿದರು. ಈ ವೇಳೆ ಇ.ಒ.ರವರು ಒಳ ಬಂದು ಅವರನ್ನು ಹೊರ ಹೋಗುವಂತೆ ವಿನಂತಿಸಿದರು. ಬಳಿಕ ಮತ್ತೆ ಸಮಾಲೋಚನೆ ಮುಂದುವರಿಯಿತು.

ಈ ಮಧ್ಯೆ ಪಕ್ಷದ ಜಿಲ್ಲಾ ಹೈಕಮಾಂಡ್ ಬಂಡೆದ್ದ ಸದಸ್ಯರನ್ನು ಸಂಪರ್ಕಿಸಿ ಮನವೊಲಿಸುವ ಕಾರ್ಯ ಮಾಡಿದರೂ ಫಲಕಾರಿಯಾಗಲಿಲ್ಲ.

ಸಭೆಗೆ ಇ.ಒ.ಬಂದ ಬಳಿಕ ಮತ್ತೆ ಸಮಾಲೋಚನೆ ಮುಂದುವರಿಯಿತು. ಆದರೆ ಹರೀಶ್ ಇಂಜಾಡಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮನಸ್ಸು ಮಾಡಲಿಲ್ಲವೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಸಭೆಯಿಂದ ಹೊರನಡೆದರು.

ಬಳಿಕ ಚುನಾವಣಾ ಪ್ರಕ್ರಿಯೆ ನಡೆಯಿತು.‌ ಹರೀಶ್ ಇಂಜಾಡಿಯವರ ಹೆಸರನ್ನು ಸೌಮ್ಯ ಸೂಚಿಸಿ ಡಾ. ರಘು ಅನುಮೋದಿಸಿದರೆಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!