ಕಡಬ:ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿನ್ನೆ ಮಹೇಶ್ ಕುಮಾರ್ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್ ಸೂಚಿಸಿತ್ತು. ಆದರೆ ಇಂದು ಇದಕ್ಕೆ ಹರೀಶ್ ಇಂಜಾಡಿ, ಅಶೋಕ್ ನೆಕ್ರಾಜೆ ಬಂಡೆದ್ದು ಸ್ಪರ್ಧೆ ನಡೆಸುವ ಸಾಧ್ಯತೆ ಎದುರಾಯಿತು.
ಈ ಹಿನ್ನೆಲೆಯಲ್ಲಿ ನೇಮಕಗೊಂಡ ಸದಸ್ಯರು ಮಾತ್ರ ಇದ್ದು ಸಮಾಲೋಚನೆ ನಡೆಯಿತು. ಇದು ಒಂದು ಗಂಟೆಯಾದರೂ ಮುಗಿಯದಿದ್ದಾಗ ಹೊರಗೆ ಕಾಯುತ್ತಿದ್ದ ಕೆಲವರು ಒಳಕ್ಕೆ ಹೋಗಿ ಮಾತನಾಡಿದರು. ಈ ವೇಳೆ ಇ.ಒ.ರವರು ಒಳ ಬಂದು ಅವರನ್ನು ಹೊರ ಹೋಗುವಂತೆ ವಿನಂತಿಸಿದರು. ಬಳಿಕ ಮತ್ತೆ ಸಮಾಲೋಚನೆ ಮುಂದುವರಿಯಿತು.
ಈ ಮಧ್ಯೆ ಪಕ್ಷದ ಜಿಲ್ಲಾ ಹೈಕಮಾಂಡ್ ಬಂಡೆದ್ದ ಸದಸ್ಯರನ್ನು ಸಂಪರ್ಕಿಸಿ ಮನವೊಲಿಸುವ ಕಾರ್ಯ ಮಾಡಿದರೂ ಫಲಕಾರಿಯಾಗಲಿಲ್ಲ.
ಸಭೆಗೆ ಇ.ಒ.ಬಂದ ಬಳಿಕ ಮತ್ತೆ ಸಮಾಲೋಚನೆ ಮುಂದುವರಿಯಿತು. ಆದರೆ ಹರೀಶ್ ಇಂಜಾಡಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮನಸ್ಸು ಮಾಡಲಿಲ್ಲವೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಸಭೆಯಿಂದ ಹೊರನಡೆದರು.
ಬಳಿಕ ಚುನಾವಣಾ ಪ್ರಕ್ರಿಯೆ ನಡೆಯಿತು. ಹರೀಶ್ ಇಂಜಾಡಿಯವರ ಹೆಸರನ್ನು ಸೌಮ್ಯ ಸೂಚಿಸಿ ಡಾ. ರಘು ಅನುಮೋದಿಸಿದರೆಂದು ತಿಳಿದುಬಂದಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…