ಕಡಬ:ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿನ್ನೆ ಮಹೇಶ್ ಕುಮಾರ್ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್ ಸೂಚಿಸಿತ್ತು. ಆದರೆ ಇಂದು ಇದಕ್ಕೆ ಹರೀಶ್ ಇಂಜಾಡಿ, ಅಶೋಕ್ ನೆಕ್ರಾಜೆ ಬಂಡೆದ್ದು ಸ್ಪರ್ಧೆ ನಡೆಸುವ ಸಾಧ್ಯತೆ ಎದುರಾಯಿತು.
ಈ ಹಿನ್ನೆಲೆಯಲ್ಲಿ ನೇಮಕಗೊಂಡ ಸದಸ್ಯರು ಮಾತ್ರ ಇದ್ದು ಸಮಾಲೋಚನೆ ನಡೆಯಿತು. ಇದು ಒಂದು ಗಂಟೆಯಾದರೂ ಮುಗಿಯದಿದ್ದಾಗ ಹೊರಗೆ ಕಾಯುತ್ತಿದ್ದ ಕೆಲವರು ಒಳಕ್ಕೆ ಹೋಗಿ ಮಾತನಾಡಿದರು. ಈ ವೇಳೆ ಇ.ಒ.ರವರು ಒಳ ಬಂದು ಅವರನ್ನು ಹೊರ ಹೋಗುವಂತೆ ವಿನಂತಿಸಿದರು. ಬಳಿಕ ಮತ್ತೆ ಸಮಾಲೋಚನೆ ಮುಂದುವರಿಯಿತು.
ಈ ಮಧ್ಯೆ ಪಕ್ಷದ ಜಿಲ್ಲಾ ಹೈಕಮಾಂಡ್ ಬಂಡೆದ್ದ ಸದಸ್ಯರನ್ನು ಸಂಪರ್ಕಿಸಿ ಮನವೊಲಿಸುವ ಕಾರ್ಯ ಮಾಡಿದರೂ ಫಲಕಾರಿಯಾಗಲಿಲ್ಲ.
ಸಭೆಗೆ ಇ.ಒ.ಬಂದ ಬಳಿಕ ಮತ್ತೆ ಸಮಾಲೋಚನೆ ಮುಂದುವರಿಯಿತು. ಆದರೆ ಹರೀಶ್ ಇಂಜಾಡಿ ಸ್ಪರ್ಧೆಯಿಂದ ಹಿಂದೆ ಸರಿಯುವ ಮನಸ್ಸು ಮಾಡಲಿಲ್ಲವೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ಸಭೆಯಿಂದ ಹೊರನಡೆದರು.
ಬಳಿಕ ಚುನಾವಣಾ ಪ್ರಕ್ರಿಯೆ ನಡೆಯಿತು. ಹರೀಶ್ ಇಂಜಾಡಿಯವರ ಹೆಸರನ್ನು ಸೌಮ್ಯ ಸೂಚಿಸಿ ಡಾ. ರಘು ಅನುಮೋದಿಸಿದರೆಂದು ತಿಳಿದುಬಂದಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…