ಜನ ಮನದ ನಾಡಿ ಮಿಡಿತ

Advertisement

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಮೇಲೆ ಆಕ್ರೋಶ..ಕಾರಣ..?

ಮಂಡಿಯೂರಿ ಕದನ ವಿರಾಮಕ್ಕೆ ಬಂದ ಪಾಕಿಸ್ತಾನಿಯರಿಗೆ ಯಾವಾಗ ಬುದ್ಧಿ ಬರುತ್ತೋ ಗೊತ್ತಿಲ್ಲ. ಜಂಟಿ ಕೆಳಗೆ ಬಿದ್ದರೂ, ಮೀಸೆ ಮಣ್ಣಾಗಲಿಲ್ಲ ಅನ್ನೋ ಹಾಗೆ ಇವರ ಭಂಡತನಕ್ಕೆನೂ ಕಮ್ಮಿ ಇಲ್ಲ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರ ಈ ವರ್ತನೆಯೇ ಇದಕ್ಕೆ ತಾಜಾ ಉದಾಹರಣೆಯಾಗಿದೆ.

 

ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಪತರಗುಟ್ಟಿದ ಪಾಕಿಸ್ತಾನದಲ್ಲಿ ವಿಜಯೋತ್ಸವ ಆಚರಿಸುತ್ತಾರೆ ಅಂದ್ರೆ ಭಾರತೀಯರು ಅದ್ಯಾವ ದಿಕ್ಕಿಗೆ ತಿರುಗಿ ನಗಬೇಕೋ ನೀವೇ ಹೇಳಿ. ಶಾಹಿದ್ ಅಫ್ರಿದಿ ಅವರು ಇಂತಹ ಪುಂಡಾಟಕ್ಕೆ ಮುಂದಾಗಿದ್ದು, ಯುದ್ಧ ಗೆದ್ದಿದ್ದೇವೆ ಎಂದು ವಿಜಯೋತ್ಸವದ ಮೆರವಣಿಗೆ ಮಾಡಿದ್ದಾರೆ.ಕರಾಚಿಯಲ್ಲಿ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರು ಱಲಿ ಮಾಡಿದ್ದಾರೆ. ಅಫ್ರಿದಿ ಜೊತೆಗಿದ್ದವರು ಈ ವಿಡಿಯೋ ರೆಕಾರ್ಡ್ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ.ಇತ್ತೀಚೆಗೆ ಮಾತನಾಡಿದ್ದ ಶಾಹಿದ್ ಅಫ್ರಿದಿ ಅವರು ನಾವೇ ಭಾರತದ ಮೇಲಿನ ಯುದ್ಧವನ್ನು ಗೆದ್ದಿದ್ದೇವೆ. ಪಾಕಿಸ್ತಾನ ಕದನ ವಿರಾಮಕ್ಕೆ ಮನವಿ ಮಾಡಿಕೊಳ್ಳಲಿಲ್ಲ ಎಂದಿದ್ದರು. ಅಲ್ಲದೇ ಪಹಲ್ಗಾಮ್ ದಾಳಿಗೆ ಭಾರತವೇ ಕಾರಣ ಎಂದು ಗೂಬೆ ಕೂರಿಸಿದ್ದಾರೆ.

ಭಾರತ ಮಾಡಿದ ತಪ್ಪುಗಳಿಂದಲೇ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಆದರೆ ಭಾರತ ಪಾಕಿಸ್ತಾನದ ಮೇಲೆ ಆರೋಪ ಮಾಡುತ್ತದೆ. ಭಾರತವೇ ಭಾರತೀಯರನ್ನು ಕೊಲ್ಲುವಂತೆ ಮಾಡಿಕೊಂಡಿದೆ.

ಇಸ್ಲಾಂ ಧರ್ಮ ನಮಗೆ ಶಾಂತಿಯನ್ನು ಮಾತ್ರ ಬೋಧಿಸುತ್ತದೆ. ಪಾಕಿಸ್ತಾನ ಎಂದಿಗೂ ಇಂತಹ ಭಯೋತ್ಪಾದನಾ ದಾಳಿಗೆ ಬೆಂಬಲ ನೀಡುವುದಿಲ್ಲ. ಭಾರತೀಯರು ತಮ್ಮನ್ನು ತಾವೇ ದೂಷಿಸಿಕೊಳ್ಳಬೇಕು. ನಾವು ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಲು ಸದಾ ಪ್ರಯತ್ನ ಪಡುತ್ತೇವೆ ಎಂದು ಶಾಹಿದ್ ಅಫ್ರೀದಿ ಹೇಳಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!